ಚಾಮರಾಜನಗರ: ಅಡ್ಡ ಬಂದ ನಾಯಿಯಿಂದ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ತಾಲ್ಲೂಕು ಮಾದಾಪುರ ಬಳಿ ಘಟನೆ ಸಂಭವಿಸಿದೆ. ಚಾಮರಾಜನಗರ ಕಡ್ನವಾಡಿ ಗ್ರಾಮದ ಶಿವಮೂರ್ತಿ (46) ಹಾಗೂ ಗಂಭೀರವಾಗಿ ಗಾಯಗೊಂಡಿದ್ದ ಮಹದೇವಪ್ಪ (55) ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಮಹದೇಶ್ವರ ಬೆಟ್ಟಕ್ಕೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ನಾಯಿ ಅಡ್ಡಬಂದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.