ಅಪರಾಧ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಭೀಕರ ಹತ್ಯೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ. ಇಲ್ಲಿನ ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಪ್ರೀತಿ ನಿರಾಕರಿಸಿದ ಕಾರಣಕ್ಕೆ ವಿಶ್ವ ಅಲಿಯಾಸ್ ಗಿರೀಶ್‌ ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇಂದು ( ಮೇ 15 ) ನಸುಕಿನ ಜಾವ ನಿದ್ರೆಯಲ್ಲಿದ್ದ ಅಂಜಲಿಯನ್ನು ವಿಶ್ವ ಎಂಬ ಆರೋಪಿ ಬೆಳಗ್ಗೆ 5.30ರ ಸಮಯಕ್ಕೆ ಮಲಗಿದ್ದಲ್ಲೇ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿ ಸದ್ಯ ತಲೆ ಮರೆಸಿಕೊಂಡಿದ್ದಾನೆ. ಇನ್ನು ವಿಶ್ವ ಅಂಜಲಿಯನ್ನು ಪ್ರೀತಿಸುತ್ತಿದ್ದ, ಆದರೆ ಅಂಜಲಿ ಆತನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.

ಈ ಹಿಂದೆ ಅಂಜಲಿಯನ್ನು ಮೈಸೂರಿಗೆ ಬರುವಂತೆ ಧಮ್ಕಿ ಹಾಕಿದ್ದ ವಿಶ್ವ ಒಂದುವೇಳೆ ಬಾರದೇ ಇದ್ದರೆ ನೇಹಾ ಹಿರೇಮಠ್‌ ಮಾದರಿಯಲ್ಲೇ ನಿನ್ನನ್ನೂ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ವಿಶ್ವ ವಿರುದ್ಧ ಹಲವು ಕಳ್ಳತನಗಳಲ್ಲಿ ಶಾಮೀಲಾದ ಪ್ರಕರಣಗಳಿವೆ.

ಇನ್ನು ವಿಶ್ವ ಕೊಲೆ ಬೆದರಿಕೆ ಹಾಕಿರುವ ವಿಚಾರವನ್ನು ಅಂಜಲಿಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ ಇದನ್ನು ಗಂಭೀರವಾಗಿ ಪರಿಗಣಿಸದ ಪೊಲೀಸರು ಇದೆಲ್ಲಾ ಮೂಢನಂಬಿಕೆ ಎಂದು ಹೇಳಿದ್ದರು.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago