ಅಪರಾಧ

ಸೊಸೆಯಿಂದಲೇ ಮಾವನ ಕೊಲೆ

ಸಾಲಿಗ್ರಾಮ : ಮನೆ ಮತ್ತು ಜಮೀನನ್ನು ನಮ್ಮ ಹೆಸರಿಗೆ ಮಾಡಿಕೊಡಿ ಎಂದು ಮಾವನೊಂದಿಗೆ ಜಗಳ ತೆಗೆದು, ಸೊಸೆಯೇ ಥಳಿಸಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕೆಡಗ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಕೆಡಗ ಗ್ರಾಮದ ನಾಗರಾಜು (೭೦) ಕೊಲೆಯಾದವರು.

ಮೈಸೂರು ನಗರದ ಸಿಎಆರ್‌ನಲ್ಲಿ ಪೊಲೀಸ್ ಸಿಬ್ಬಂದಿಯಾಗಿರುವ ಪಂಚಾಕ್ಷರಿ ಅವರ ಪತ್ನಿ ಡಿಲಾಕ್ಷಿ ತಮ್ಮ ಮಕ್ಕಳೊಂದಿಗೆ ಮೈಸೂರಿನಲ್ಲಿ ವಾಸವಾಗಿದ್ದು ಆಗಾಗ್ಗೆ ಊರಿಗೆ ಬಂದು ಹೋಗುತ್ತಾ ಇದ್ದರು. ೨೦ ದಿನಗಳ ಹಿಂದೆ ಮನೆ ಕಟ್ಟಿಸಲು ಕೆಡಗ ಗ್ರಾಮಕ್ಕೆ ಆಗಮಿಸಿದ್ದ ಅವರು ಗ್ರಾಮದಲ್ಲಿ ನೆಲೆಸಿದ್ದರು. ಪಂಚಾಕ್ಷರಿ ಮೈಸೂರಿಗೆ ಕೆಲಸಕ್ಕೆ ಹೋಗಿ ಬರುತ್ತಿದ್ದರು.

ಈ ಸಂದರ್ಭದಲ್ಲಿ ಸೊಸೆ ಡಿಲಾಕ್ಷಿ ಅವರು ತಮ್ಮ ಮಾವ ನಾಗರಾಜು, ಅತ್ತೆ ಗೌರಮ್ಮ ಅವರುಗಳಿಗೆ ‘ನಿಮಗೆ ವಯಸ್ಸಾಗಿದೆ. ಮನೆ ಮತ್ತು ಜಮೀನು ಎಲ್ಲವನ್ನೂ ನಮ್ಮ ಹೆಸರಿಗೆ ಬರೆದುಕೊಟ್ಟು, ನೀವು ಎಲ್ಲಿಯಾದರೂ ಹೋಗಿ ಸಾಯಿರಿ’ ಎಂದು ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ.

ಆ.೨೩ರ ಶನಿವಾರ ಬೆಳಿಗ್ಗೆ ೮ ಗಂಟೆ ಸುಮಾರಿನಲ್ಲಿ ಮಾವ ನಾಗರಾಜು ಜಮೀನಿಗೆ ಹೋಗಿದ್ದರು. ಸುಮಾರು ೧೧ ಗಂಟೆಯ ಸಮಯದಲ್ಲಿ ಕೆಲವರು ಮನೆಗೆ ಬಂದು ನಿಮ್ಮ ಹೊಸ ಮನೆಯ ಬಳಿ ನಿಮ್ಮ ಯಜಮಾನರು ನರಳಾಡುತ್ತ ಬಿದ್ದಿದ್ದಾರೆ ಎಂದು ಗೌರಮ್ಮ ಅವರಿಗೆ ತಿಳಿಸಿದ್ದಾರೆ. ತಕ್ಷಣ ಅಲ್ಲಿಗೆ ಹೋಗಿ ನೋಡಿದಾಗ ನಾಗರಾಜು ಅವರ ಎರಡೂ ಕಾಲಿನ ಬಳಿ ಹಾಗೂ ಎಡ ಕಣ್ಣಿನ ಬಳಿ ರಕ್ತ ಬರುತ್ತಿತ್ತು. ಅವರು ತೀವ್ರವಾಗಿ ನರಳುತ್ತಿದ್ದರು. ಏನಾಯಿತು ಎಂದು ವಿಚಾರಿಸಿದಾಗ, ಸೊಸೆ ಡಿಲಾಕ್ಷಿಯು ಮನೆ ಮತ್ತು ಜಮೀನನ್ನು ನಮ್ಮ ಹೆಸರಿಗೆ ಬರೆಯಿರಿ ಎಂದು ಒತ್ತಾಯಿಸಿ ನಿಂದಿಸಿದಳು. ಅದನ್ನು ಪ್ರಶ್ನಿಸಿದ್ದಕ್ಕೆ ಕೈಯಿಂದ ಹೊಡೆದು ಕೆಳಕ್ಕೆ ಕೆಡವಿ, ಕಾಲಿನಿಂದ ಒದ್ದು, ಮರದ ರಿಪೀಸ್ ಪಟ್ಟಿಯಿಂದ ಮೈ, ಕೈಗೆ ಹಾಗೂ ಮಚ್ಚಿನಿಂದ ನನ್ನ ಕಾಲುಗಳಿಗೆ ಹೊಡೆದಳು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಗ ಪಂಚಾಕ್ಷರಿ ಸ್ಥಳದಲ್ಲಿದ್ದರೂ ಜಗಳ ನಿಲ್ಲಿಸದೆ ನೋಡುತ್ತಾ ನಿಂತಿದ್ದನು. ನನ್ನ ಗಂಡನಿಗೆ ಏಕೆ ಹೀಗೆ ಮಾಡಿದ್ದೀಯಾ ಎಂದು ಕೇಳಿದಾಗ ಕೊಲೆ ಬೆದರಿಕೆ ಹಾಕಿದಳು. ನಂತರ ಊರಿನೊಳಗೆ ಹೋಗಿ ಗ್ರಾಮಸ್ಥರನ್ನು ಮತ್ತು ಸಂಬಂಧಿಕರನ್ನು ಕರೆದುಕೊಂಡು ಬಂದು ಪತಿ ನಾಗರಾಜು ಅವರನ್ನು ಆಸ್ಪತ್ರೆಗೆ ಸೇರಿಸೋಣ ಎಂದು ಹೋದಾಗ ಯಾರೂ ಸಿಗಲಿಲ್ಲ. ಮತ್ತೆ ಸ್ಥಳಕ್ಕೆ ವಾಪಸ್ ಬಂದು ನೋಡಿದಾಗ ನಮ್ಮ ಪತಿ ನಾಗರಾಜು ಸತ್ತು ಹೋಗಿದ್ದರು ಎಂದು ಗೌರಮ್ಮ ತಿಳಿಸಿದ್ದಾರೆ.

ಗೌರಮ್ಮ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡಿಲಾಕ್ಷಿ ಮತ್ತು ಪಂಚಾಕ್ಷರಿ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್, ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ರಘು, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಶಶಿಕುಮಾರ್ ಹಾಗೂ ಶಿವಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

11 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

12 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

13 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

13 hours ago