ಮೈಸೂರು : ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ಧರೊಬ್ಬರು 21 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಗೋಕುಲಂನ ವಿವೇಕಾನಂದ ರಸ್ತೆಯ ಗೌಸ್(76) ಎಂಬುವರೇ ಹಣ ಕಳೆದುಕೊಂಡವರು. ಎರಡು ದಿನಗಳ ಹಿಂದೆ ಕ್ರೆಡಿಟ್ ಕಾರ್ಡ್ನ ಲಿಮಿಟ್ ಹೆಚ್ಚಿಸುವುದಾಗಿ ಗೌಸ್ ಅವರ ಮೊಬೈಲ್ಗೆ ಎಸ್ಎಂಎಸ್ ಬಂದಿದೆ.
ಇದನ್ನು ನಂಬಿದ ಗೌಸ್ ಅವರು ತಮ್ಮ ಇಮೇಲ್, ಕ್ರೆಡಿಟ್ ಕಾರ್ಡ್ ಸಂಖ್ಯೆ, ಜನ್ಮದಿನಾಂಕ ವಿವರಗಳನ್ನ ಒದಗಿಸಿದ್ದಾರೆ. ಅದೇ ಸಮಯದಲ್ಲಿ ದುಷ್ಕರ್ಮಿಗಳು ಎಚ್ಡಿಎಫ್ಸಿ ಕ್ರೆಡಿಟ್ ಕಾರ್ಡ್ನಿಂದ ೧,೦೦,೪೮೫ ರೂ. ಡ್ರಾ ಮಾಡಿದ್ದಾರೆ.
ಅವರು ತಕ್ಷಣವೇ ಎಚ್ಡಿಎಫ್ಸಿ ಬ್ಯಾಂಕ್ ಕಾರ್ಡ್ ಬ್ಲಾಕ್ ಮಾಡಿಸಿದ್ದಾರೆ. ಆದರೆ ಕಿಲಾಡಿಗಳು ಐಡಿಎಫ್ಸಿ ಬ್ಯಾಂಕ್ ಖಾತೆಯಲ್ಲಿದ್ದ ೨೦ ಲಕ್ಷ ರೂ. ಹಣವನ್ನೂ ಸಹ ಡ್ರಾ ಮಾಡಿದ್ದಾರೆ. ವಂಚನೆಗೆ ಒಳಗಾದ ಗೌಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…