ಅಪರಾಧ

ಮೆಸೇಜ್ ನಂಬಿ 21 ಲಕ್ಷ ಕಳೆದುಕೊಂಡ ವೃದ್ಧ

ಮೈಸೂರು : ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ಧರೊಬ್ಬರು 21 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಗೋಕುಲಂನ ವಿವೇಕಾನಂದ ರಸ್ತೆಯ ಗೌಸ್(76) ಎಂಬುವರೇ ಹಣ ಕಳೆದುಕೊಂಡವರು. ಎರಡು ದಿನಗಳ ಹಿಂದೆ ಕ್ರೆಡಿಟ್ ಕಾರ್ಡ್‌ನ ಲಿಮಿಟ್ ಹೆಚ್ಚಿಸುವುದಾಗಿ ಗೌಸ್ ಅವರ ಮೊಬೈಲ್‌ಗೆ ಎಸ್‌ಎಂಎಸ್ ಬಂದಿದೆ.

ಇದನ್ನು ನಂಬಿದ ಗೌಸ್ ಅವರು ತಮ್ಮ ಇಮೇಲ್, ಕ್ರೆಡಿಟ್ ಕಾರ್ಡ್ ಸಂಖ್ಯೆ, ಜನ್ಮದಿನಾಂಕ ವಿವರಗಳನ್ನ ಒದಗಿಸಿದ್ದಾರೆ. ಅದೇ ಸಮಯದಲ್ಲಿ ದುಷ್ಕರ್ಮಿಗಳು ಎಚ್‌ಡಿಎಫ್‌ಸಿ ಕ್ರೆಡಿಟ್ ಕಾರ್ಡ್‌ನಿಂದ ೧,೦೦,೪೮೫ ರೂ. ಡ್ರಾ ಮಾಡಿದ್ದಾರೆ.

ಅವರು ತಕ್ಷಣವೇ ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಬ್ಲಾಕ್ ಮಾಡಿಸಿದ್ದಾರೆ. ಆದರೆ ಕಿಲಾಡಿಗಳು ಐಡಿಎಫ್‌ಸಿ ಬ್ಯಾಂಕ್ ಖಾತೆಯಲ್ಲಿದ್ದ ೨೦ ಲಕ್ಷ ರೂ. ಹಣವನ್ನೂ ಸಹ ಡ್ರಾ ಮಾಡಿದ್ದಾರೆ. ವಂಚನೆಗೆ ಒಳಗಾದ ಗೌಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

29 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

31 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

33 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago