ಮೈಸೂರು : ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ಧರೊಬ್ಬರು 21 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಗೋಕುಲಂನ ವಿವೇಕಾನಂದ ರಸ್ತೆಯ ಗೌಸ್(76) ಎಂಬುವರೇ ಹಣ ಕಳೆದುಕೊಂಡವರು. ಎರಡು ದಿನಗಳ ಹಿಂದೆ ಕ್ರೆಡಿಟ್ ಕಾರ್ಡ್ನ ಲಿಮಿಟ್ ಹೆಚ್ಚಿಸುವುದಾಗಿ ಗೌಸ್ ಅವರ ಮೊಬೈಲ್ಗೆ ಎಸ್ಎಂಎಸ್ ಬಂದಿದೆ.
ಇದನ್ನು ನಂಬಿದ ಗೌಸ್ ಅವರು ತಮ್ಮ ಇಮೇಲ್, ಕ್ರೆಡಿಟ್ ಕಾರ್ಡ್ ಸಂಖ್ಯೆ, ಜನ್ಮದಿನಾಂಕ ವಿವರಗಳನ್ನ ಒದಗಿಸಿದ್ದಾರೆ. ಅದೇ ಸಮಯದಲ್ಲಿ ದುಷ್ಕರ್ಮಿಗಳು ಎಚ್ಡಿಎಫ್ಸಿ ಕ್ರೆಡಿಟ್ ಕಾರ್ಡ್ನಿಂದ ೧,೦೦,೪೮೫ ರೂ. ಡ್ರಾ ಮಾಡಿದ್ದಾರೆ.
ಅವರು ತಕ್ಷಣವೇ ಎಚ್ಡಿಎಫ್ಸಿ ಬ್ಯಾಂಕ್ ಕಾರ್ಡ್ ಬ್ಲಾಕ್ ಮಾಡಿಸಿದ್ದಾರೆ. ಆದರೆ ಕಿಲಾಡಿಗಳು ಐಡಿಎಫ್ಸಿ ಬ್ಯಾಂಕ್ ಖಾತೆಯಲ್ಲಿದ್ದ ೨೦ ಲಕ್ಷ ರೂ. ಹಣವನ್ನೂ ಸಹ ಡ್ರಾ ಮಾಡಿದ್ದಾರೆ. ವಂಚನೆಗೆ ಒಳಗಾದ ಗೌಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…