ಅಪರಾಧ

ಪಾಕ್‌ ಧ್ವಜ ಬಳಕೆ ಪ್ರಕರಣ: ನಿರೂಪಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಇಸಿಎ-ಪಿಎಂ ಆರ್ಥಿಕ ಸಲಹಾ ಮಂಡಳಿ ಬಿಡುಗಡೆಗೊಳಿಸಿದ್ದ ಧರ್ಮಾದಾರಿತ ಜನಸಂಖ್ಯೆ ಮಾಹಿತಿಯನ್ನು ತೋರಿಸುವ ವೇಳೆ ಮುಸ್ಲಿಮರ ಜನಸಂಖ್ಯೆ ತಿಳಿಸುವ ವೇಳೆ ಪಾಕಿಸ್ತಾನ ಧ್ವಜ ಬಳಿಸಿದ ಅರೋಪದಡಿ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ಹಾಗೂ ನಿರೂಪಕ್‌ ಅಜಿತ್‌ ಹನುಮಕ್ಕನವರ್‌ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್‌ 505(2) ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನ ಧ್ವಜ ಬಳಸಿತ್ತು. ಈ ಕಾರ್ಯಕ್ರಮವನ್ನು ಅಜಿತ್‌ ಹನುಮಕ್ಕನವರ್‌ ನಿರ್ವಹಿಸುತ್ತಿದ್ದರು.

ಈ ವರದಿಯನ್ನು ಆಲ್ಟ್‌ ನ್ಯೂಸ್‌ ಸಹ ಸಂಪಾದಕ ಮಹಮ್ಮದ್‌ ಝುಬೇರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದರು.

ಈ ಬಗ್ಗೆ ಎಲ್ಲೆಡೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗತ್ತಿರುವ ಬೆನ್ನಲ್ಲೇ ಚಾನೆಲ್‌, “ಇದೊಂದು ದುರುದ್ದೇಶ ಇಲ್ಲದ, ಕಣ್ತಪ್ಪಿನಿಂದ ಆದ ಅಚಾತುರ್ಯವಾಗಿದ್ದು, ಈ ಪ್ರಮಾದಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಷಾದ ವ್ಯಕ್ತಪಡಿಸುತ್ತದೆ” ಎಂದು ಸ್ಪಷ್ಟನೆ ನೀಡಿದ್ದರು. ಆಗಿದ್ದರೂ ಅವರ ಮೇಲೆ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

6 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

6 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

7 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

7 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

7 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

7 hours ago