ಅಪರಾಧ

ಪಾಕ್‌ ಧ್ವಜ ಬಳಕೆ ಪ್ರಕರಣ: ನಿರೂಪಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಇಸಿಎ-ಪಿಎಂ ಆರ್ಥಿಕ ಸಲಹಾ ಮಂಡಳಿ ಬಿಡುಗಡೆಗೊಳಿಸಿದ್ದ ಧರ್ಮಾದಾರಿತ ಜನಸಂಖ್ಯೆ ಮಾಹಿತಿಯನ್ನು ತೋರಿಸುವ ವೇಳೆ ಮುಸ್ಲಿಮರ ಜನಸಂಖ್ಯೆ ತಿಳಿಸುವ ವೇಳೆ ಪಾಕಿಸ್ತಾನ ಧ್ವಜ ಬಳಿಸಿದ ಅರೋಪದಡಿ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ಹಾಗೂ ನಿರೂಪಕ್‌ ಅಜಿತ್‌ ಹನುಮಕ್ಕನವರ್‌ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್‌ 505(2) ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನ ಧ್ವಜ ಬಳಸಿತ್ತು. ಈ ಕಾರ್ಯಕ್ರಮವನ್ನು ಅಜಿತ್‌ ಹನುಮಕ್ಕನವರ್‌ ನಿರ್ವಹಿಸುತ್ತಿದ್ದರು.

ಈ ವರದಿಯನ್ನು ಆಲ್ಟ್‌ ನ್ಯೂಸ್‌ ಸಹ ಸಂಪಾದಕ ಮಹಮ್ಮದ್‌ ಝುಬೇರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದರು.

ಈ ಬಗ್ಗೆ ಎಲ್ಲೆಡೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗತ್ತಿರುವ ಬೆನ್ನಲ್ಲೇ ಚಾನೆಲ್‌, “ಇದೊಂದು ದುರುದ್ದೇಶ ಇಲ್ಲದ, ಕಣ್ತಪ್ಪಿನಿಂದ ಆದ ಅಚಾತುರ್ಯವಾಗಿದ್ದು, ಈ ಪ್ರಮಾದಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಷಾದ ವ್ಯಕ್ತಪಡಿಸುತ್ತದೆ” ಎಂದು ಸ್ಪಷ್ಟನೆ ನೀಡಿದ್ದರು. ಆಗಿದ್ದರೂ ಅವರ ಮೇಲೆ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

4 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

4 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

5 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

5 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

6 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

6 hours ago