ಅಪರಾಧ

ಪಾಕ್‌ ಧ್ವಜ ಬಳಕೆ ಪ್ರಕರಣ: ನಿರೂಪಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಇಸಿಎ-ಪಿಎಂ ಆರ್ಥಿಕ ಸಲಹಾ ಮಂಡಳಿ ಬಿಡುಗಡೆಗೊಳಿಸಿದ್ದ ಧರ್ಮಾದಾರಿತ ಜನಸಂಖ್ಯೆ ಮಾಹಿತಿಯನ್ನು ತೋರಿಸುವ ವೇಳೆ ಮುಸ್ಲಿಮರ ಜನಸಂಖ್ಯೆ ತಿಳಿಸುವ ವೇಳೆ ಪಾಕಿಸ್ತಾನ ಧ್ವಜ ಬಳಿಸಿದ ಅರೋಪದಡಿ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ಹಾಗೂ ನಿರೂಪಕ್‌ ಅಜಿತ್‌ ಹನುಮಕ್ಕನವರ್‌ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್‌ 505(2) ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನ ಧ್ವಜ ಬಳಸಿತ್ತು. ಈ ಕಾರ್ಯಕ್ರಮವನ್ನು ಅಜಿತ್‌ ಹನುಮಕ್ಕನವರ್‌ ನಿರ್ವಹಿಸುತ್ತಿದ್ದರು.

ಈ ವರದಿಯನ್ನು ಆಲ್ಟ್‌ ನ್ಯೂಸ್‌ ಸಹ ಸಂಪಾದಕ ಮಹಮ್ಮದ್‌ ಝುಬೇರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದರು.

ಈ ಬಗ್ಗೆ ಎಲ್ಲೆಡೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗತ್ತಿರುವ ಬೆನ್ನಲ್ಲೇ ಚಾನೆಲ್‌, “ಇದೊಂದು ದುರುದ್ದೇಶ ಇಲ್ಲದ, ಕಣ್ತಪ್ಪಿನಿಂದ ಆದ ಅಚಾತುರ್ಯವಾಗಿದ್ದು, ಈ ಪ್ರಮಾದಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಷಾದ ವ್ಯಕ್ತಪಡಿಸುತ್ತದೆ” ಎಂದು ಸ್ಪಷ್ಟನೆ ನೀಡಿದ್ದರು. ಆಗಿದ್ದರೂ ಅವರ ಮೇಲೆ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

4 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

4 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

4 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 hours ago