ganesh (1)
ಮೈಸೂರು : ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಪಟಾಕಿ ಹಾರಿದ ಪರಿಣಾಮ ಅವರು ತೀವ್ರ ಗಾಯವಾಗಿರುವ ಘಟನೆ ನಡೆದಿದೆ.
ನಗರದ ಶ್ರೀರಾಮ ಸೇನೆ ಮೈಸೂರು ಜಿಲ್ಲಾಧ್ಯಕ್ಷ ಸಂಜಯ್(೫೨) ಗಾಯಗೊಂಡವರು. ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಯು
ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಇದೇ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ಇವರು ಪಟಾಕಿ ಸಿಡಿಸುತ್ತಿದ್ದಾಗ, ಬೆಂಕಿಯ ಕಿಡಿ ತಗುಲಿದ ಪರಿಣಾಮ ಇವರ ಬಲಗಣ್ಣಿಗೆ ತೀವ್ರ ಗಾಯವಾಗಿದೆ. ಸ್ಥಳದಲ್ಲಿದ್ದ ಪೊಲೀಸರು, ಕೂಡಲೇ ಆಟೋ ವ್ಯವಸ್ಥೆ ಮಾಡಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಗೆ ಕರೆ ದೊಯ್ಯಲಾಯಿತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮಾಜಿ ಸಂಸದ ಪ್ರತಾಪ್ಸಿಂಹ ಅವರು ಗಾಯಾಳುವನ್ನು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…