ಅಪರಾಧ

ಮೈಸೂರು | ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿತ : ವ್ಯಕ್ತಿ ಕಣ್ಣಿಗೆ ಗಾಯ

ಮೈಸೂರು : ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಪಟಾಕಿ ಹಾರಿದ ಪರಿಣಾಮ ಅವರು ತೀವ್ರ ಗಾಯವಾಗಿರುವ ಘಟನೆ ನಡೆದಿದೆ.

ನಗರದ ಶ್ರೀರಾಮ ಸೇನೆ ಮೈಸೂರು ಜಿಲ್ಲಾಧ್ಯಕ್ಷ ಸಂಜಯ್(೫೨) ಗಾಯಗೊಂಡವರು. ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಯು
ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಇದೇ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ಇವರು ಪಟಾಕಿ ಸಿಡಿಸುತ್ತಿದ್ದಾಗ, ಬೆಂಕಿಯ ಕಿಡಿ ತಗುಲಿದ ಪರಿಣಾಮ ಇವರ ಬಲಗಣ್ಣಿಗೆ ತೀವ್ರ ಗಾಯವಾಗಿದೆ. ಸ್ಥಳದಲ್ಲಿದ್ದ ಪೊಲೀಸರು, ಕೂಡಲೇ ಆಟೋ ವ್ಯವಸ್ಥೆ ಮಾಡಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಗೆ ಕರೆ ದೊಯ್ಯಲಾಯಿತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮಾಜಿ ಸಂಸದ ಪ್ರತಾಪ್‌ಸಿಂಹ ಅವರು ಗಾಯಾಳುವನ್ನು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago