ಅಪರಾಧ

ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಅತ್ಮಹತ್ಯೆ ಪ್ರಕರಣ: ಜಿಪಂ ಸಿಇಒ ಗೆ ಕ್ಲೀನ್‌ ಚಿಟ್‌!

ಮೈಸೂರು: ಕೋವಿಡ್‌ ಸಮಯದಲ್ಲಿ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್‌ ಚಿಟ್‌ ನೀಡಿದೆ.

ನಂಜನಗೂಡಿನ ಟಿಎಚ್‌ಓ ನಾಗೇಂದ್ರ ಅವರು ಕೋವಿಡ್‌ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆಗೆ ಶರಣಾಗಲು ಜಿಪಂ ಸಿಇಒ ಕಾರಣ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಸಿಇಒ ಪ್ರಶಾಂತ್‌ ಮಿಶ್ರಾ ಅವರ ಕಿರುಕುಳದಿಂದಲೇ ನಾಗೇಂದ್ರ ಅವರು ಮರಣ ಹೊಂದಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿತ್ತು.

ಈ ಹಿನ್ನಲೆ ಮಿಶ್ರಾ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಹಾಗೂ ಕಿರಿಕುಳ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು.

ಈ ಪ್ರಕರಣ ತನಿಖೆ ನಡೆಸಿದ ಪೊಲೀಸರು ಬಿ-ರಿಪೋರ್ಟ್‌ ನೀಡಿದ್ದರು. ಅದರಲ್ಲಿ ಪ್ರಶಾಂತ್‌ ಮಿಶ್ರಾ ಅವರ ಪರವಾಗಿದ್ದರಿಂದ ಈ ವರದಿ ವಿರೋಧಿಸಿ ನಾಗೇಂದ್ರ ಅವರ ಮಡದಿ ನ್ಯಾಯಾಲಯದಲ್ಲಿ ಪ್ರೊಟೆಸ್ಟ್‌ ಅರ್ಜಿ ಸಲ್ಲಿಸಿದ್ದರು.

ಇನ್ನು ಈ ಅರ್ಜಿ ವಿಚಾರಣೆ ನಡೆಸಿದ ನಗರದ ಮೂರನೇ ಸಿವಿಲ್‌ ನ್ಯಾಯಲಯ, ಪೊಲೀಸರ ಬಿ-ರಿಪೋರ್ಟ್‌ನ್ನು ಎತ್ತಿ ಹಿಡಿಯಿತು ಹಾಗೂ ಪ್ರಶಾಂತ್‌ ಮಿಶ್ರಾ ಅವರ ಮೇಲಿನ ಆರೋಪಗಳು ನಿರಾಧಾರ ಎಂದು ಕೋರ್ಟ್‌ ಹೇಳಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

17 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

36 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

59 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago