ಮೈಸೂರು: ಕೋವಿಡ್ ಸಮಯದಲ್ಲಿ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ನಂಜನಗೂಡಿನ ಟಿಎಚ್ಓ ನಾಗೇಂದ್ರ ಅವರು ಕೋವಿಡ್ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆಗೆ ಶರಣಾಗಲು ಜಿಪಂ ಸಿಇಒ ಕಾರಣ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಸಿಇಒ ಪ್ರಶಾಂತ್ ಮಿಶ್ರಾ ಅವರ ಕಿರುಕುಳದಿಂದಲೇ ನಾಗೇಂದ್ರ ಅವರು ಮರಣ ಹೊಂದಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿತ್ತು.
ಈ ಹಿನ್ನಲೆ ಮಿಶ್ರಾ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಹಾಗೂ ಕಿರಿಕುಳ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು.
ಈ ಪ್ರಕರಣ ತನಿಖೆ ನಡೆಸಿದ ಪೊಲೀಸರು ಬಿ-ರಿಪೋರ್ಟ್ ನೀಡಿದ್ದರು. ಅದರಲ್ಲಿ ಪ್ರಶಾಂತ್ ಮಿಶ್ರಾ ಅವರ ಪರವಾಗಿದ್ದರಿಂದ ಈ ವರದಿ ವಿರೋಧಿಸಿ ನಾಗೇಂದ್ರ ಅವರ ಮಡದಿ ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಅರ್ಜಿ ಸಲ್ಲಿಸಿದ್ದರು.
ಇನ್ನು ಈ ಅರ್ಜಿ ವಿಚಾರಣೆ ನಡೆಸಿದ ನಗರದ ಮೂರನೇ ಸಿವಿಲ್ ನ್ಯಾಯಲಯ, ಪೊಲೀಸರ ಬಿ-ರಿಪೋರ್ಟ್ನ್ನು ಎತ್ತಿ ಹಿಡಿಯಿತು ಹಾಗೂ ಪ್ರಶಾಂತ್ ಮಿಶ್ರಾ ಅವರ ಮೇಲಿನ ಆರೋಪಗಳು ನಿರಾಧಾರ ಎಂದು ಕೋರ್ಟ್ ಹೇಳಿತು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…