ಮೈಸೂರು: ಕೋವಿಡ್ ಸಮಯದಲ್ಲಿ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ನಂಜನಗೂಡಿನ ಟಿಎಚ್ಓ ನಾಗೇಂದ್ರ ಅವರು ಕೋವಿಡ್ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆಗೆ ಶರಣಾಗಲು ಜಿಪಂ ಸಿಇಒ ಕಾರಣ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಸಿಇಒ ಪ್ರಶಾಂತ್ ಮಿಶ್ರಾ ಅವರ ಕಿರುಕುಳದಿಂದಲೇ ನಾಗೇಂದ್ರ ಅವರು ಮರಣ ಹೊಂದಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿತ್ತು.
ಈ ಹಿನ್ನಲೆ ಮಿಶ್ರಾ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಹಾಗೂ ಕಿರಿಕುಳ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು.
ಈ ಪ್ರಕರಣ ತನಿಖೆ ನಡೆಸಿದ ಪೊಲೀಸರು ಬಿ-ರಿಪೋರ್ಟ್ ನೀಡಿದ್ದರು. ಅದರಲ್ಲಿ ಪ್ರಶಾಂತ್ ಮಿಶ್ರಾ ಅವರ ಪರವಾಗಿದ್ದರಿಂದ ಈ ವರದಿ ವಿರೋಧಿಸಿ ನಾಗೇಂದ್ರ ಅವರ ಮಡದಿ ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಅರ್ಜಿ ಸಲ್ಲಿಸಿದ್ದರು.
ಇನ್ನು ಈ ಅರ್ಜಿ ವಿಚಾರಣೆ ನಡೆಸಿದ ನಗರದ ಮೂರನೇ ಸಿವಿಲ್ ನ್ಯಾಯಲಯ, ಪೊಲೀಸರ ಬಿ-ರಿಪೋರ್ಟ್ನ್ನು ಎತ್ತಿ ಹಿಡಿಯಿತು ಹಾಗೂ ಪ್ರಶಾಂತ್ ಮಿಶ್ರಾ ಅವರ ಮೇಲಿನ ಆರೋಪಗಳು ನಿರಾಧಾರ ಎಂದು ಕೋರ್ಟ್ ಹೇಳಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…