ಮೈಸೂರು: ಕೋವಿಡ್ ಸಮಯದಲ್ಲಿ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ನಂಜನಗೂಡಿನ ಟಿಎಚ್ಓ ನಾಗೇಂದ್ರ ಅವರು ಕೋವಿಡ್ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆಗೆ ಶರಣಾಗಲು ಜಿಪಂ ಸಿಇಒ ಕಾರಣ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಸಿಇಒ ಪ್ರಶಾಂತ್ ಮಿಶ್ರಾ ಅವರ ಕಿರುಕುಳದಿಂದಲೇ ನಾಗೇಂದ್ರ ಅವರು ಮರಣ ಹೊಂದಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿತ್ತು.
ಈ ಹಿನ್ನಲೆ ಮಿಶ್ರಾ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಹಾಗೂ ಕಿರಿಕುಳ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು.
ಈ ಪ್ರಕರಣ ತನಿಖೆ ನಡೆಸಿದ ಪೊಲೀಸರು ಬಿ-ರಿಪೋರ್ಟ್ ನೀಡಿದ್ದರು. ಅದರಲ್ಲಿ ಪ್ರಶಾಂತ್ ಮಿಶ್ರಾ ಅವರ ಪರವಾಗಿದ್ದರಿಂದ ಈ ವರದಿ ವಿರೋಧಿಸಿ ನಾಗೇಂದ್ರ ಅವರ ಮಡದಿ ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಅರ್ಜಿ ಸಲ್ಲಿಸಿದ್ದರು.
ಇನ್ನು ಈ ಅರ್ಜಿ ವಿಚಾರಣೆ ನಡೆಸಿದ ನಗರದ ಮೂರನೇ ಸಿವಿಲ್ ನ್ಯಾಯಲಯ, ಪೊಲೀಸರ ಬಿ-ರಿಪೋರ್ಟ್ನ್ನು ಎತ್ತಿ ಹಿಡಿಯಿತು ಹಾಗೂ ಪ್ರಶಾಂತ್ ಮಿಶ್ರಾ ಅವರ ಮೇಲಿನ ಆರೋಪಗಳು ನಿರಾಧಾರ ಎಂದು ಕೋರ್ಟ್ ಹೇಳಿತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…