ಮೈಸೂರು: ಕೋವಿಡ್ ಸಮಯದಲ್ಲಿ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ನಂಜನಗೂಡಿನ ಟಿಎಚ್ಓ ನಾಗೇಂದ್ರ ಅವರು ಕೋವಿಡ್ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆಗೆ ಶರಣಾಗಲು ಜಿಪಂ ಸಿಇಒ ಕಾರಣ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಸಿಇಒ ಪ್ರಶಾಂತ್ ಮಿಶ್ರಾ ಅವರ ಕಿರುಕುಳದಿಂದಲೇ ನಾಗೇಂದ್ರ ಅವರು ಮರಣ ಹೊಂದಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿತ್ತು.
ಈ ಹಿನ್ನಲೆ ಮಿಶ್ರಾ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಹಾಗೂ ಕಿರಿಕುಳ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು.
ಈ ಪ್ರಕರಣ ತನಿಖೆ ನಡೆಸಿದ ಪೊಲೀಸರು ಬಿ-ರಿಪೋರ್ಟ್ ನೀಡಿದ್ದರು. ಅದರಲ್ಲಿ ಪ್ರಶಾಂತ್ ಮಿಶ್ರಾ ಅವರ ಪರವಾಗಿದ್ದರಿಂದ ಈ ವರದಿ ವಿರೋಧಿಸಿ ನಾಗೇಂದ್ರ ಅವರ ಮಡದಿ ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಅರ್ಜಿ ಸಲ್ಲಿಸಿದ್ದರು.
ಇನ್ನು ಈ ಅರ್ಜಿ ವಿಚಾರಣೆ ನಡೆಸಿದ ನಗರದ ಮೂರನೇ ಸಿವಿಲ್ ನ್ಯಾಯಲಯ, ಪೊಲೀಸರ ಬಿ-ರಿಪೋರ್ಟ್ನ್ನು ಎತ್ತಿ ಹಿಡಿಯಿತು ಹಾಗೂ ಪ್ರಶಾಂತ್ ಮಿಶ್ರಾ ಅವರ ಮೇಲಿನ ಆರೋಪಗಳು ನಿರಾಧಾರ ಎಂದು ಕೋರ್ಟ್ ಹೇಳಿತು.
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯೇಕವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…