ಅಪರಾಧ

ಗಿಲ್ಕಿ ವೆಂಕಟೇಶ್‌ ಹತ್ಯೆ ಪ್ರಕರಣ : ಡಾನ್‌ ಪಟ್ಟಕ್ಕಾಗಿ ನಡೀತಾ ಮರ್ಡರ್‌..! ಆರೋಪಿಗಳು ತಪ್ಪೊಪ್ಪಿಕೊಂಡಿದ್ದೇನು.?

ಮೈಸೂರು : ನಿನ್ನೆ(ಅ.7) ಮಧ್ಯಾಹ್ನ ವೆಂಕಟೇಶ್‌ ಆಲಿಯಾಸ್‌ ಗಿಲ್ಕಿ ವೆಂಕಟೇಶ್‌ನ ಬರ್ಬರ ಕೊಲೆಯಾಗಿತ್ತು. ಕೊಲೆಗೆ ಡಾನ್ ಪಟ್ಟಕ್ಕಾಗಿ ಶುರುವಾದ ಪೈಪೋಟಿಯೆ ಕಾರಣ ಅನ್ನೋದು ಈಗ ಸ್ಪಷ್ಟವಾಗುತ್ತಿದ್ದು, ಅಲ್ಲದೇ ಆರೋಪಿಗಳೇ ಪೊಲೀಸರಿಗೆ ಶರಣಾಗಿರೋದು ಅಚ್ಚರಿಯೂ ಆಗಿದೆ.

ನಿನ್ನೆ ಮಧ್ಯಾಹ್ನ ಆಟೋ ಮತ್ತು ದ್ವಿಚಕ್ರ ವಾಹನದಲ್ಲಿ ಬಂದ ಆರು ಜನರು ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ವೆಂಕಟೇಶ್‌ನನ್ನು ನಿಲ್ಲಿಸಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಘಟನೆ ಮೈಸೂರನ್ನ ಬೆಚ್ಚಿಬೀಳಿಸಿತ್ತು. ಕೊಲೆ ಮಾಡಿ ಪರಾರಿ ಆಗಿದ್ದ ಆರೋಪಿಗಳು ಇದೀಗ ತಡರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸರಿಗೆ ಶರಣಾದ ಆರೋಪಿಗಳು ಯಾತಕ್ಕಾಗಿ ಕೊಲೆ ಮಾಡಿದ್ದು ಎಂದು ತಪ್ಪೊಪ್ಪಿಕೊಂಡಿದ್ದು. ರೌಡಿ ಫೀಲ್ಡ್‌ನಲ್ಲಿ ಡಾನ್ ಪಟ್ಟಕ್ಕಾಗಿ ನಡೆದ ಪೈಪೋಟಿಯಿಂದಲೇ ಕೊಲೆ ಎಂಬುದು ಬಯಲಾಗಿದೆ.

ಇದನ್ನು ಓದಿ : ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಐದು ತಿಂಗಳ ಹಿಂದೆ ಮೈಸೂರಿನ ಕ್ಯಾತಮಾರನಹಳ್ಳಿಯ ರೌಡಿಶೀಟರ್ ಕಾರ್ತಿಕ್‌ನ ಮರ್ಡರ್ ಆಗಿತ್ತು. ಹೀಗಾಗಿ ಕಾರ್ತಿಕ್‌ಗೆ ಇದ್ದ ಡಾನ್ ಪಟ್ಟದಲ್ಲಿ ಯಾರು ಕೂರಬೇಕು ಎಂಬ ಬಗ್ಗೆ ಕಾರ್ತಿಕ್ ಗುಂಪಿನಲ್ಲೇ ಪೈಪೋಟಿ ಶುರುವಾಗಿತ್ತು. ಡಾನ್ ಪಟ್ಟಕ್ಕಾಗಿ ಕೊಲೆಯಾದ ವೆಂಕಟೇಶ್ ಹಾಗೂ ಕೊಲೆಯ ರೂವಾರಿ ಹಾಲಪ್ಪ ನಡುವೆ ಒಳ ಜಗಳ ನಡೆಯುತ್ತಿತ್ತು. ಕಾರ್ತಿಕ್ ಕೊಲೆಗೂ ಮುನ್ನ ಮನಃಸ್ತಾಪವಾಗಿ ವೆಂಕಟೇಶ್ ಈ ಗುಂಪಿನಿಂದ ಬೇರೆ ಆಗಿದ್ದ. ಕಾರ್ತಿಕ್ ಕೊಲೆ ನಂತರ ಫೀಲ್ಡ್‌ನಲ್ಲಿ ಮತ್ತೆ ಮೆರೆಯಲು ವೆಂಕಟೇಶ್ ಶುರು ಮಾಡಿದ್ದ. ಇದನ್ನು ಸಹಿಸದ ಹಾಲಪ್ಪ ಹಾಗೂ ಸಹಚರರು ಜಗಳ ಶುರು ಮಾಡಿದ್ದರು ಎನ್ನಲಾಗಿದೆ.

ಹಾಲಪ್ಪ ತನ್ನ ಡಾನ್ ಪಟ್ಟಕ್ಕೆ ಅಡ್ಡಿಯಾಗಿದ್ದಾನೆ ಎಂದು ಗಿಲ್ಕಿ ವೆಂಕಟೇಶ ಹಾಲಪ್ಪನ ಕೊಲೆಗೆ ಸ್ಕೆಚ್ ಹಾಕಿದ್ದ. ಹಾಲಪ್ಪನನ್ನು ಕೊಲ್ಲಲು ವೆಂಕಟೇಶ್ ಹಾಗೂ ಅವನ ಶಿಷ್ಯಂದಿರು ಹುಡುಕಾಟ ನಡೆಸಿದ್ದರು. ವಾರದ ಹಿಂದೆ ಹಾಲಪ್ಪ ಸ್ನೇಹಿತ ಮಂಜುನಾಥ್ ಮನೆ ಮುಂದೆ ಹಾಲಪ್ಪ ಎಲ್ಲಿ ಅಂತಾ ಜಗಳವಾಡಿದ್ದರು. ಈ ಸಂಬಂಧ ನಜರಬಾದ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಗಿಲ್ಕಿ ವೆಂಕಟೇಶ್ ಗ್ಯಾಂಗ್ʼನ ಗಲಾಟೆಗೆ ಬೆಚ್ಚಿದ್ದ ಹಾಲಪ್ಪ, ಪ್ರತಿಯಾಗಿ ಗಿಲ್ಕಿ ವೆಂಕಟೇಶ್ ಕೊಲೆಗೆ ಸ್ಕೆಚ್ ಹಾಕಿದ್ದ. ತನ್ನ ಐವರು ಸಹಚರರನ್ನು ಬಿಟ್ಟು ವೆಂಕಟೇಶ್‌ನನ್ನ ನಡು ರಸ್ತೆಯಲ್ಲೇ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿಸಿದ್ದಾನೆ. ಕೊಲೆಯಾದ ಬಳಿಕ ಹಾಲಪ್ಪ ಎಸ್ಕೇಪ್ ಆಗಿದ್ದಾನೆ. ಸಹಚರರು ಪೊಲೀಸರಿಗೆ ಶರಣಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

11 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 hour ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago