ಅಪರಾಧ

ಗಿಲ್ಕಿ ವೆಂಕಟೇಶ್‌ ಹತ್ಯೆ ಪ್ರಕರಣ : ಡಾನ್‌ ಪಟ್ಟಕ್ಕಾಗಿ ನಡೀತಾ ಮರ್ಡರ್‌..! ಆರೋಪಿಗಳು ತಪ್ಪೊಪ್ಪಿಕೊಂಡಿದ್ದೇನು.?

ಮೈಸೂರು : ನಿನ್ನೆ(ಅ.7) ಮಧ್ಯಾಹ್ನ ವೆಂಕಟೇಶ್‌ ಆಲಿಯಾಸ್‌ ಗಿಲ್ಕಿ ವೆಂಕಟೇಶ್‌ನ ಬರ್ಬರ ಕೊಲೆಯಾಗಿತ್ತು. ಕೊಲೆಗೆ ಡಾನ್ ಪಟ್ಟಕ್ಕಾಗಿ ಶುರುವಾದ ಪೈಪೋಟಿಯೆ ಕಾರಣ ಅನ್ನೋದು ಈಗ ಸ್ಪಷ್ಟವಾಗುತ್ತಿದ್ದು, ಅಲ್ಲದೇ ಆರೋಪಿಗಳೇ ಪೊಲೀಸರಿಗೆ ಶರಣಾಗಿರೋದು ಅಚ್ಚರಿಯೂ ಆಗಿದೆ.

ನಿನ್ನೆ ಮಧ್ಯಾಹ್ನ ಆಟೋ ಮತ್ತು ದ್ವಿಚಕ್ರ ವಾಹನದಲ್ಲಿ ಬಂದ ಆರು ಜನರು ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ವೆಂಕಟೇಶ್‌ನನ್ನು ನಿಲ್ಲಿಸಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಘಟನೆ ಮೈಸೂರನ್ನ ಬೆಚ್ಚಿಬೀಳಿಸಿತ್ತು. ಕೊಲೆ ಮಾಡಿ ಪರಾರಿ ಆಗಿದ್ದ ಆರೋಪಿಗಳು ಇದೀಗ ತಡರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸರಿಗೆ ಶರಣಾದ ಆರೋಪಿಗಳು ಯಾತಕ್ಕಾಗಿ ಕೊಲೆ ಮಾಡಿದ್ದು ಎಂದು ತಪ್ಪೊಪ್ಪಿಕೊಂಡಿದ್ದು. ರೌಡಿ ಫೀಲ್ಡ್‌ನಲ್ಲಿ ಡಾನ್ ಪಟ್ಟಕ್ಕಾಗಿ ನಡೆದ ಪೈಪೋಟಿಯಿಂದಲೇ ಕೊಲೆ ಎಂಬುದು ಬಯಲಾಗಿದೆ.

ಇದನ್ನು ಓದಿ : ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಐದು ತಿಂಗಳ ಹಿಂದೆ ಮೈಸೂರಿನ ಕ್ಯಾತಮಾರನಹಳ್ಳಿಯ ರೌಡಿಶೀಟರ್ ಕಾರ್ತಿಕ್‌ನ ಮರ್ಡರ್ ಆಗಿತ್ತು. ಹೀಗಾಗಿ ಕಾರ್ತಿಕ್‌ಗೆ ಇದ್ದ ಡಾನ್ ಪಟ್ಟದಲ್ಲಿ ಯಾರು ಕೂರಬೇಕು ಎಂಬ ಬಗ್ಗೆ ಕಾರ್ತಿಕ್ ಗುಂಪಿನಲ್ಲೇ ಪೈಪೋಟಿ ಶುರುವಾಗಿತ್ತು. ಡಾನ್ ಪಟ್ಟಕ್ಕಾಗಿ ಕೊಲೆಯಾದ ವೆಂಕಟೇಶ್ ಹಾಗೂ ಕೊಲೆಯ ರೂವಾರಿ ಹಾಲಪ್ಪ ನಡುವೆ ಒಳ ಜಗಳ ನಡೆಯುತ್ತಿತ್ತು. ಕಾರ್ತಿಕ್ ಕೊಲೆಗೂ ಮುನ್ನ ಮನಃಸ್ತಾಪವಾಗಿ ವೆಂಕಟೇಶ್ ಈ ಗುಂಪಿನಿಂದ ಬೇರೆ ಆಗಿದ್ದ. ಕಾರ್ತಿಕ್ ಕೊಲೆ ನಂತರ ಫೀಲ್ಡ್‌ನಲ್ಲಿ ಮತ್ತೆ ಮೆರೆಯಲು ವೆಂಕಟೇಶ್ ಶುರು ಮಾಡಿದ್ದ. ಇದನ್ನು ಸಹಿಸದ ಹಾಲಪ್ಪ ಹಾಗೂ ಸಹಚರರು ಜಗಳ ಶುರು ಮಾಡಿದ್ದರು ಎನ್ನಲಾಗಿದೆ.

ಹಾಲಪ್ಪ ತನ್ನ ಡಾನ್ ಪಟ್ಟಕ್ಕೆ ಅಡ್ಡಿಯಾಗಿದ್ದಾನೆ ಎಂದು ಗಿಲ್ಕಿ ವೆಂಕಟೇಶ ಹಾಲಪ್ಪನ ಕೊಲೆಗೆ ಸ್ಕೆಚ್ ಹಾಕಿದ್ದ. ಹಾಲಪ್ಪನನ್ನು ಕೊಲ್ಲಲು ವೆಂಕಟೇಶ್ ಹಾಗೂ ಅವನ ಶಿಷ್ಯಂದಿರು ಹುಡುಕಾಟ ನಡೆಸಿದ್ದರು. ವಾರದ ಹಿಂದೆ ಹಾಲಪ್ಪ ಸ್ನೇಹಿತ ಮಂಜುನಾಥ್ ಮನೆ ಮುಂದೆ ಹಾಲಪ್ಪ ಎಲ್ಲಿ ಅಂತಾ ಜಗಳವಾಡಿದ್ದರು. ಈ ಸಂಬಂಧ ನಜರಬಾದ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಗಿಲ್ಕಿ ವೆಂಕಟೇಶ್ ಗ್ಯಾಂಗ್ʼನ ಗಲಾಟೆಗೆ ಬೆಚ್ಚಿದ್ದ ಹಾಲಪ್ಪ, ಪ್ರತಿಯಾಗಿ ಗಿಲ್ಕಿ ವೆಂಕಟೇಶ್ ಕೊಲೆಗೆ ಸ್ಕೆಚ್ ಹಾಕಿದ್ದ. ತನ್ನ ಐವರು ಸಹಚರರನ್ನು ಬಿಟ್ಟು ವೆಂಕಟೇಶ್‌ನನ್ನ ನಡು ರಸ್ತೆಯಲ್ಲೇ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿಸಿದ್ದಾನೆ. ಕೊಲೆಯಾದ ಬಳಿಕ ಹಾಲಪ್ಪ ಎಸ್ಕೇಪ್ ಆಗಿದ್ದಾನೆ. ಸಹಚರರು ಪೊಲೀಸರಿಗೆ ಶರಣಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

5 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

6 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

6 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

11 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

12 hours ago