Mysore
29
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

ಹನೂರು | ಪ್ರತ್ಯೇಕ ಪ್ರಕರಣ ; ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ಶಾಗ್ಯ ಗ್ರಾಮದ ರಾಚನಾಯಕ( 75)ಅಲಿಯಾಸ್ ಸಿಂಗಿರಾಚಯ್ಯ, ಹುತ್ತೂರು ಗ್ರಾಮದ ರಂಗಸ್ವಾಮಿ (55) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ: ಹನೂರು ಪಟ್ಟಣ ವ್ಯಾಪ್ತಿಯ ಆರ್ ಎಸ್ ದೊಡ್ಡಿ ಗ್ರಾಮದ ಮಹದೇಶ್ವರ ದೇವಾಲಯದ ಬಳಿ ಶಾಖೆ ಗ್ರಾಮದ ರಾಚನಾಯಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಸ್ ನಿಲ್ದಾಣದ ಬಳಿ ನಿಂತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಿಕೊಂಡಿದ್ದ ಸುಮಾರು 39 ಸಾವಿರ ಮೌಲ್ಯದ 780 ಗ್ರಾಂ ಒಣಗಾಂಜಾ ವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಹುತ್ತೂರು ಗ್ರಾಮದ ರಂಗಸ್ವಾಮಿ ಲೊಕ್ಕನಹಳ್ಳಿ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದ ಆಂಡಿ ಪಾಳ್ಯ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ನಿಂತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 8 ಸಾವಿರ ಮೌಲ್ಯದ 159 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ದಾಳಿಯಲ್ಲಿ ಎಎಸ್ಐ ಶಿವಮೂರ್ತಿ, ಮುಖ್ಯಪೇದೆ ದೊಡ್ಡವೀರ ಶೆಟ್ಟಿ, ನಾಗೇಂದ್ರ, ಚಂದ್ರು ಪೇದೆಗಳಾದ ವಿಶ್ವನಾಥ್, ಶಿವಕುಮಾರ್, ರಾಘವೇಂದ್ರ ಪಾಲ್ಗೊಂಡಿದ್ದರು.

Tags:
error: Content is protected !!