ಅಪರಾಧ

ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಕೆಗೆ ವರ್ಚುವಲ್‌ ಸಂಖ್ಯೆ ಬಳಸುತ್ತಿದ್ದ ಬಿಗ್‌ಬಾಸ್‌ ವಿನ್ನರ್!

ನವದೆಹಲಿ: ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಸಲು ಮತ್ತು ಹಾವಾಡಿಗರಿಗೆ ಸೂಚನೆಗಳನ್ನು ಕೊಡಲು ಸೀಸನ್‌ 2 ಹಿಂದಿ ಬಿಗ್‌ಬಾಗ್‌ ವಿನ್ನರ್‌ ಹಾಗೂ ಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವರ್ಚುವಲ್‌ ಫೋನ್‌ ಸಂಖ್ಯೆಯನ್ನು ಬಳಸಿದ್ದಾರೆ ಎಂದು ನೋಯ್ಡಾ ಪೊಲೀಸರು ಶನಿವಾರ ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಸಲ್ಲಿಸಿದ 1200 ಪುಟಗಳ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.

ಎಂಟು ಆರೋಪಿಗಳನ್ನು ಹೆಸರಿಸಿ 24 ಸಾಕ್ಷಿಗಳನ್ನು ಹೇಳಿಕೆಗಳನ್ನು ಒಳಗೊಂಡಿರುವ ಚಾರ್ಜಾಶೀಟ್‌ನಲ್ಲಿ ಯೂಟ್ಯೂಬರ್‌ ಪಾರ್ಟಿಗಳಿಗೆ ಹೇಗೆ ವಿಷವನ್ನು ಪೂರೈಸುತ್ತಿದ್ದರು ಎಂಬ ಆಘಾತಕಾರಿ ವಿವರಗಳು ಇವೆ. ಈ ಎಲ್ಲಾ ಕೃತ್ಯಗಳಿಗೆ ಆರೋಪಿಗಳು ವರ್ಚುವಲ್‌ ಸಂಖ್ಯೆ ಬಳಸಿದ್ದಾರೆ. ಇದರಿಂದ ಗೌಪ್ಯತೆ ಮತ್ತು ಲೋಕೇಶನ್‌ ಕಂಡು ಹಿಡಿಯುವುದು ಅಷ್ಟು ಸುಲಭವಲ್ಲ ಎಂದು ನೋಯ್ಡಾ ಪೊಲೀಸರು ಹೇಳೀದ್ದಾರೆ.

ಈಶ್ವರ್‌ ಒಡೆತನದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಾವುಗಳಿಂದ ವಿಷವನ್ನು ಹೊರತೆಗೆಯಲಾಗುತ್ತಿತ್ತು. ಸದ್ಯ ಯೂಟ್ಯೂಬರ್‌ ವಿರುದ್ಧ ನಾರ್ಕೋಟಿಕ್‌ ಡ್ರಗ್ಸ್‌ ಮತ್ತು ಸೈಕೋಟ್ರೋಪಿಕ್‌ ಸಬ್‌ಸ್ಟನ್ಸ್‌ ಆಕ್ಟ್‌ 1985ರ ಸೆಕ್ಷನ್‌ಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಐದು ಹಾವಾಡಿಗರು, ಒಂಭತ್ತು ಹಾವುಗಳೊಂದಿಗೆ ಬಂಧಿಸಲಾಗಿತ್ತು. ಬಂಧಿತ ಹಾವಾಡಿಗರು ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣದ ಜಾಡು ಹಿಡಿದ ಪೊಲೀಸರು ಎಲ್ವಿಶ್‌ ಯಾದವ್‌ ಮತ್ತು ಇತರ ಆರೋಪಿಗಳನ್ನು ಬಂಧಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

1 hour ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

1 hour ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

2 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

2 hours ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

2 hours ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago