ಅಪರಾಧ

ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಕೆಗೆ ವರ್ಚುವಲ್‌ ಸಂಖ್ಯೆ ಬಳಸುತ್ತಿದ್ದ ಬಿಗ್‌ಬಾಸ್‌ ವಿನ್ನರ್!

ನವದೆಹಲಿ: ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಸಲು ಮತ್ತು ಹಾವಾಡಿಗರಿಗೆ ಸೂಚನೆಗಳನ್ನು ಕೊಡಲು ಸೀಸನ್‌ 2 ಹಿಂದಿ ಬಿಗ್‌ಬಾಗ್‌ ವಿನ್ನರ್‌ ಹಾಗೂ ಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವರ್ಚುವಲ್‌ ಫೋನ್‌ ಸಂಖ್ಯೆಯನ್ನು ಬಳಸಿದ್ದಾರೆ ಎಂದು ನೋಯ್ಡಾ ಪೊಲೀಸರು ಶನಿವಾರ ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಸಲ್ಲಿಸಿದ 1200 ಪುಟಗಳ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.

ಎಂಟು ಆರೋಪಿಗಳನ್ನು ಹೆಸರಿಸಿ 24 ಸಾಕ್ಷಿಗಳನ್ನು ಹೇಳಿಕೆಗಳನ್ನು ಒಳಗೊಂಡಿರುವ ಚಾರ್ಜಾಶೀಟ್‌ನಲ್ಲಿ ಯೂಟ್ಯೂಬರ್‌ ಪಾರ್ಟಿಗಳಿಗೆ ಹೇಗೆ ವಿಷವನ್ನು ಪೂರೈಸುತ್ತಿದ್ದರು ಎಂಬ ಆಘಾತಕಾರಿ ವಿವರಗಳು ಇವೆ. ಈ ಎಲ್ಲಾ ಕೃತ್ಯಗಳಿಗೆ ಆರೋಪಿಗಳು ವರ್ಚುವಲ್‌ ಸಂಖ್ಯೆ ಬಳಸಿದ್ದಾರೆ. ಇದರಿಂದ ಗೌಪ್ಯತೆ ಮತ್ತು ಲೋಕೇಶನ್‌ ಕಂಡು ಹಿಡಿಯುವುದು ಅಷ್ಟು ಸುಲಭವಲ್ಲ ಎಂದು ನೋಯ್ಡಾ ಪೊಲೀಸರು ಹೇಳೀದ್ದಾರೆ.

ಈಶ್ವರ್‌ ಒಡೆತನದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಾವುಗಳಿಂದ ವಿಷವನ್ನು ಹೊರತೆಗೆಯಲಾಗುತ್ತಿತ್ತು. ಸದ್ಯ ಯೂಟ್ಯೂಬರ್‌ ವಿರುದ್ಧ ನಾರ್ಕೋಟಿಕ್‌ ಡ್ರಗ್ಸ್‌ ಮತ್ತು ಸೈಕೋಟ್ರೋಪಿಕ್‌ ಸಬ್‌ಸ್ಟನ್ಸ್‌ ಆಕ್ಟ್‌ 1985ರ ಸೆಕ್ಷನ್‌ಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಐದು ಹಾವಾಡಿಗರು, ಒಂಭತ್ತು ಹಾವುಗಳೊಂದಿಗೆ ಬಂಧಿಸಲಾಗಿತ್ತು. ಬಂಧಿತ ಹಾವಾಡಿಗರು ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣದ ಜಾಡು ಹಿಡಿದ ಪೊಲೀಸರು ಎಲ್ವಿಶ್‌ ಯಾದವ್‌ ಮತ್ತು ಇತರ ಆರೋಪಿಗಳನ್ನು ಬಂಧಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

2 hours ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago