ಅಪರಾಧ

ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಕೆಗೆ ವರ್ಚುವಲ್‌ ಸಂಖ್ಯೆ ಬಳಸುತ್ತಿದ್ದ ಬಿಗ್‌ಬಾಸ್‌ ವಿನ್ನರ್!

ನವದೆಹಲಿ: ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಸಲು ಮತ್ತು ಹಾವಾಡಿಗರಿಗೆ ಸೂಚನೆಗಳನ್ನು ಕೊಡಲು ಸೀಸನ್‌ 2 ಹಿಂದಿ ಬಿಗ್‌ಬಾಗ್‌ ವಿನ್ನರ್‌ ಹಾಗೂ ಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವರ್ಚುವಲ್‌ ಫೋನ್‌ ಸಂಖ್ಯೆಯನ್ನು ಬಳಸಿದ್ದಾರೆ ಎಂದು ನೋಯ್ಡಾ ಪೊಲೀಸರು ಶನಿವಾರ ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಸಲ್ಲಿಸಿದ 1200 ಪುಟಗಳ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.

ಎಂಟು ಆರೋಪಿಗಳನ್ನು ಹೆಸರಿಸಿ 24 ಸಾಕ್ಷಿಗಳನ್ನು ಹೇಳಿಕೆಗಳನ್ನು ಒಳಗೊಂಡಿರುವ ಚಾರ್ಜಾಶೀಟ್‌ನಲ್ಲಿ ಯೂಟ್ಯೂಬರ್‌ ಪಾರ್ಟಿಗಳಿಗೆ ಹೇಗೆ ವಿಷವನ್ನು ಪೂರೈಸುತ್ತಿದ್ದರು ಎಂಬ ಆಘಾತಕಾರಿ ವಿವರಗಳು ಇವೆ. ಈ ಎಲ್ಲಾ ಕೃತ್ಯಗಳಿಗೆ ಆರೋಪಿಗಳು ವರ್ಚುವಲ್‌ ಸಂಖ್ಯೆ ಬಳಸಿದ್ದಾರೆ. ಇದರಿಂದ ಗೌಪ್ಯತೆ ಮತ್ತು ಲೋಕೇಶನ್‌ ಕಂಡು ಹಿಡಿಯುವುದು ಅಷ್ಟು ಸುಲಭವಲ್ಲ ಎಂದು ನೋಯ್ಡಾ ಪೊಲೀಸರು ಹೇಳೀದ್ದಾರೆ.

ಈಶ್ವರ್‌ ಒಡೆತನದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಾವುಗಳಿಂದ ವಿಷವನ್ನು ಹೊರತೆಗೆಯಲಾಗುತ್ತಿತ್ತು. ಸದ್ಯ ಯೂಟ್ಯೂಬರ್‌ ವಿರುದ್ಧ ನಾರ್ಕೋಟಿಕ್‌ ಡ್ರಗ್ಸ್‌ ಮತ್ತು ಸೈಕೋಟ್ರೋಪಿಕ್‌ ಸಬ್‌ಸ್ಟನ್ಸ್‌ ಆಕ್ಟ್‌ 1985ರ ಸೆಕ್ಷನ್‌ಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಐದು ಹಾವಾಡಿಗರು, ಒಂಭತ್ತು ಹಾವುಗಳೊಂದಿಗೆ ಬಂಧಿಸಲಾಗಿತ್ತು. ಬಂಧಿತ ಹಾವಾಡಿಗರು ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣದ ಜಾಡು ಹಿಡಿದ ಪೊಲೀಸರು ಎಲ್ವಿಶ್‌ ಯಾದವ್‌ ಮತ್ತು ಇತರ ಆರೋಪಿಗಳನ್ನು ಬಂಧಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago