ಅಪರಾಧ

ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಕೆಗೆ ವರ್ಚುವಲ್‌ ಸಂಖ್ಯೆ ಬಳಸುತ್ತಿದ್ದ ಬಿಗ್‌ಬಾಸ್‌ ವಿನ್ನರ್!

ನವದೆಹಲಿ: ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಸಲು ಮತ್ತು ಹಾವಾಡಿಗರಿಗೆ ಸೂಚನೆಗಳನ್ನು ಕೊಡಲು ಸೀಸನ್‌ 2 ಹಿಂದಿ ಬಿಗ್‌ಬಾಗ್‌ ವಿನ್ನರ್‌ ಹಾಗೂ ಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವರ್ಚುವಲ್‌ ಫೋನ್‌ ಸಂಖ್ಯೆಯನ್ನು ಬಳಸಿದ್ದಾರೆ ಎಂದು ನೋಯ್ಡಾ ಪೊಲೀಸರು ಶನಿವಾರ ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಸಲ್ಲಿಸಿದ 1200 ಪುಟಗಳ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.

ಎಂಟು ಆರೋಪಿಗಳನ್ನು ಹೆಸರಿಸಿ 24 ಸಾಕ್ಷಿಗಳನ್ನು ಹೇಳಿಕೆಗಳನ್ನು ಒಳಗೊಂಡಿರುವ ಚಾರ್ಜಾಶೀಟ್‌ನಲ್ಲಿ ಯೂಟ್ಯೂಬರ್‌ ಪಾರ್ಟಿಗಳಿಗೆ ಹೇಗೆ ವಿಷವನ್ನು ಪೂರೈಸುತ್ತಿದ್ದರು ಎಂಬ ಆಘಾತಕಾರಿ ವಿವರಗಳು ಇವೆ. ಈ ಎಲ್ಲಾ ಕೃತ್ಯಗಳಿಗೆ ಆರೋಪಿಗಳು ವರ್ಚುವಲ್‌ ಸಂಖ್ಯೆ ಬಳಸಿದ್ದಾರೆ. ಇದರಿಂದ ಗೌಪ್ಯತೆ ಮತ್ತು ಲೋಕೇಶನ್‌ ಕಂಡು ಹಿಡಿಯುವುದು ಅಷ್ಟು ಸುಲಭವಲ್ಲ ಎಂದು ನೋಯ್ಡಾ ಪೊಲೀಸರು ಹೇಳೀದ್ದಾರೆ.

ಈಶ್ವರ್‌ ಒಡೆತನದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಾವುಗಳಿಂದ ವಿಷವನ್ನು ಹೊರತೆಗೆಯಲಾಗುತ್ತಿತ್ತು. ಸದ್ಯ ಯೂಟ್ಯೂಬರ್‌ ವಿರುದ್ಧ ನಾರ್ಕೋಟಿಕ್‌ ಡ್ರಗ್ಸ್‌ ಮತ್ತು ಸೈಕೋಟ್ರೋಪಿಕ್‌ ಸಬ್‌ಸ್ಟನ್ಸ್‌ ಆಕ್ಟ್‌ 1985ರ ಸೆಕ್ಷನ್‌ಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಐದು ಹಾವಾಡಿಗರು, ಒಂಭತ್ತು ಹಾವುಗಳೊಂದಿಗೆ ಬಂಧಿಸಲಾಗಿತ್ತು. ಬಂಧಿತ ಹಾವಾಡಿಗರು ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣದ ಜಾಡು ಹಿಡಿದ ಪೊಲೀಸರು ಎಲ್ವಿಶ್‌ ಯಾದವ್‌ ಮತ್ತು ಇತರ ಆರೋಪಿಗಳನ್ನು ಬಂಧಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago