ಬೆಂಗಳೂರು: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಾಂಪತ್ಯದಲ್ಲಿ ಜಗಳವಾಗಿ ಈ ರೀತಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
2019 ರಲ್ಲಿ ಮದುವೆಯಾಗಿದ್ದ ದಂಪತಿಗಳು ಸದ್ಯ ಬೆಂಗಳೂರಿನನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಪತಿ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು.
ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಪತಿ, ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ಕಲಾ ಶಶಿ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.
ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…