ಅಪರಾಧ

ಕಾಲ್ ಗರ್ಲ್ ಎಂದು ಫೇಸ್‌ಬುಕ್‌ ನಲ್ಲಿ ಪತ್ನಿ ಫೋಟೊ ಪೊಸ್ಟ್ ಮಾಡಿದ ಪತಿ!

ಬೆಂಗಳೂರು: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ವ್ಯಕ್ತಿಯೊಬ್ಬ ಫೇಸ್ಬುಕ್​ನಲ್ಲಿ ಪೋಸ್ಟ್ ಮಾಡಿದ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಾಂಪತ್ಯದಲ್ಲಿ ಜಗಳವಾಗಿ ಈ ರೀತಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2019 ರಲ್ಲಿ ಮದುವೆಯಾಗಿದ್ದ ‌ದಂಪತಿಗಳು ಸದ್ಯ ಬೆಂಗಳೂರಿನ‌ನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಪತಿ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು.

ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಪತಿ, ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್​​ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಕಲಾ ಶಶಿ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.

ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago