ಬೆಂಗಳೂರು: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಾಂಪತ್ಯದಲ್ಲಿ ಜಗಳವಾಗಿ ಈ ರೀತಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
2019 ರಲ್ಲಿ ಮದುವೆಯಾಗಿದ್ದ ದಂಪತಿಗಳು ಸದ್ಯ ಬೆಂಗಳೂರಿನನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಪತಿ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು.
ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಪತಿ, ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ಕಲಾ ಶಶಿ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.
ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…