ಅಪರಾಧ

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ ಮನೆಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಅಮಾನುಷ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ಜರುಗಿದೆ.

ಕೊಲೆಯಾದ ಗೃಹಿಣಿಯನ್ನು ಮಾನ್ಯ ಎಂದು ಗುರುತಿಸಲಾಗಿದೆ. ಈಕೆಯ ಅತ್ತೆ ರೇಣಮ್ಮ ಮತ್ತು ದೊಡ್ಡ ಮಾವನ ಸ್ಥಿತಿ ಚಿಂತಾಜಕವಾಗಿದ್ದು ಹುಬ್ಬಳ್ಳಿ ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕೃತ್ಯವೆಸಗಿದ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ಇದನ್ನು ಓದಿ: ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಇನಾಂ ವೀರಾಪೂರ ಗ್ರಾಮದ ಮಾನ್ಯಾ ಎಂಬಾಕೆ ಇದೇ ಗ್ರಾಮದ ವಿವೇಕಾನಂದ ದೊಡ್ಡಮನಿ ಎಂಬ ದಲಿತ ಯುವಕನನ್ನು ಪ್ರೀತಿಸಿ ಇದೇ ವರ್ಷ ಮೇ ತಿಂಗಳಲ್ಲಿ ಮದುವೆಯಾಗಿದ್ದಳು. ಇದಕ್ಕೆ ಮಾನ್ಯಳ ಮನೆಯವರ ವ್ಯಾಪಕ ವಿರೋಧವಿತ್ತು. ಮದುವೆಯ ನಂತರ ಮಾನ್ಯಾಳ ಕುಟುಂಬಸ್ಥರು ಕೊಲೆ ಮಾಡುವುದಾಗಿ ಮಾನ್ಯಾಳಿಗೆ ಬೆದರಿಕೆ ಹಾಕಿದ್ದರು. ಇದರಿಂದ ಹೆದರಿದ್ದ ದಂಪತಿಗಳು ಕೆಲ ದಿನಗಳು ಹಾವೇರಿಯಲ್ಲಿ ನೆಲೆಸಿ ಇತ್ತೀಚೆಗೆ ಸ್ವಗ್ರಾಮಕ್ಕೆ ಮರಳಿದ್ದರು. ಭಾನುವಾರ (ಡಿ.೨೧) ವಿವೇಕಾನಂದ ಮತ್ತು ಆತನ ತಂದೆ ಜಮೀನಿನಲ್ಲಿ ಕೆಲಸ ಮಾಡುವಾದ ಮಾನ್ಯಾಳ ತಂದೆ ಮತ್ತು ಕುಟುಂಬದ ಸದಸ್ಯರು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರಲ್ಲದೆ, ವಿವೇಕಾನಂದನ ಮನೆಗೆ ತೆರಳಿ ಮಾನ್ಯ ಮತ್ತು ಈಕೆಯ ಅತ್ತೆಯ ಮೇಲೇ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾನ್ಯ ಆರು ತಿಂಗಳ ಗರ್ಭಿಣಿಯಾಗಿದ್ದರಿಂದ ಈಕೆಯ ತಲೆ ಮತ್ತು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಈಕೆಯನ್ನು ಹುಬ್ಬಳ್ಳಿ ನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಮಾನ್ಯ ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಆರು ತಿಂಗಳ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ. ತೀವ್ರ ಹಲ್ಲೆಗೆ ಒಳಗಾದ ವಿವೇಕಾನಂದನ ತಾಯಿ ರೇಣಮ್ಮ ಹಾಗೂ ದೊಡ್ಡಪ್ಪನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕ್ರಮವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago