ಅಪರಾಧ

ಕೆಎಎಸ್‌ ಅಧಿಕಾರಿ ಪತ್ನಿ ನೇಣಿಗೆ ಶರಣು: ಮೂರು ತಿಂಗಳ ಹಿಂದಿನ ಡೆತ್‌ ನೋಟ್‌ನಲ್ಲಿತ್ತು ಸತ್ಯಾಂಶ!

ಬೆಂಗಳೂರು: ಕೆಎಎಸ್‌ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ನಹತ್ಯೆಗೆ ಶರಣಾಗರುವ ಘಟನೆ ನಗರದ ಸಂಜಯ್‌ ನಗರದಲ್ಲಿ ನಡೆದಿದೆ.

ಮೃತ ಮಹಿಳೆ ಚೈತ್ರಾಗೌಡ ಕೆಐಎಡಿಬಿ ಸಹಾಯಕ ಆಯುಕ್ತರಾದ ಶಿವಕುಮಾರ್‌ ಅವರ ಪತ್ನಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಇದೇ ವೇಳೆ ಅವರು ಮೂರು ತಿಂಗಳ ಹಿಂದೆ ಬರೆದಿಟ್ಟಿದ್ದ ಡೆತ್‌ ನೋಟ್‌ ಒಂದು ಸಿಕ್ಕಿದ್ದು, ಅದರಲ್ಲಿ ಚೈತ್ರಗೌಡ ಅವರ ಆತ್ಮಹತ್ಯೆ ಸಂಬಂಧ ಮಾಹಿತಿ ಲಭ್ಯವಾಗಿದೆ.

ಇದೇ ಮಾರ್ಚ್‌ 11 ರಂದು ಈ ಡೆತ್‌ ನೋಟ್‌ ಬರೆದಿದ್ದಾರೆ. ಇದರಲ್ಲಿ ನನ್ನ ಗಂಡ ಒಳ್ಳೆಯವರು, ಜೀವನವನ್ನು ಚೆನ್ನಾಗಿ ಎಂಜಾಯ್‌ ಮಾಡಿ, ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದಾರೆ.

ನಾನು ಡಿಪ್ರೆಷನ್‌ನಿಂದ ಬಳಲುತ್ತಿದ್ದು, ಅದರಿಂದ ಹೊರಬರಲು ಸಾಕಷ್ಟು ಬಾರಿ ಪ್ರಯತ್ನಿಸಿದರು ಅದರಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂಬುದು ಗೊತ್ತಿದೆ ಆದರೂ ನನ್ನ ಜೀವನವನ್ನು ಅಂತ್ಯ ಮಾಡುತ್ತಿದ್ದೇನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್‌ ಎಂಜಾಯ್‌ ಮಾಡಿ ಎಂದು ಮೂರು ತಿಂಗಳ ಹಿಂದೆ ಡೆತ್‌ ನೋಟ್‌ನಲ್ಲಿ ಬರೆದಿಟ್ಟಿರುವುದು ಕಂಡು ಬಂದಿದೆ.

ಈ ಸಂಬಂಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago