ಅಪರಾಧ

ಕೆಎಎಸ್‌ ಅಧಿಕಾರಿ ಪತ್ನಿ ನೇಣಿಗೆ ಶರಣು: ಮೂರು ತಿಂಗಳ ಹಿಂದಿನ ಡೆತ್‌ ನೋಟ್‌ನಲ್ಲಿತ್ತು ಸತ್ಯಾಂಶ!

ಬೆಂಗಳೂರು: ಕೆಎಎಸ್‌ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ನಹತ್ಯೆಗೆ ಶರಣಾಗರುವ ಘಟನೆ ನಗರದ ಸಂಜಯ್‌ ನಗರದಲ್ಲಿ ನಡೆದಿದೆ.

ಮೃತ ಮಹಿಳೆ ಚೈತ್ರಾಗೌಡ ಕೆಐಎಡಿಬಿ ಸಹಾಯಕ ಆಯುಕ್ತರಾದ ಶಿವಕುಮಾರ್‌ ಅವರ ಪತ್ನಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಇದೇ ವೇಳೆ ಅವರು ಮೂರು ತಿಂಗಳ ಹಿಂದೆ ಬರೆದಿಟ್ಟಿದ್ದ ಡೆತ್‌ ನೋಟ್‌ ಒಂದು ಸಿಕ್ಕಿದ್ದು, ಅದರಲ್ಲಿ ಚೈತ್ರಗೌಡ ಅವರ ಆತ್ಮಹತ್ಯೆ ಸಂಬಂಧ ಮಾಹಿತಿ ಲಭ್ಯವಾಗಿದೆ.

ಇದೇ ಮಾರ್ಚ್‌ 11 ರಂದು ಈ ಡೆತ್‌ ನೋಟ್‌ ಬರೆದಿದ್ದಾರೆ. ಇದರಲ್ಲಿ ನನ್ನ ಗಂಡ ಒಳ್ಳೆಯವರು, ಜೀವನವನ್ನು ಚೆನ್ನಾಗಿ ಎಂಜಾಯ್‌ ಮಾಡಿ, ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದಾರೆ.

ನಾನು ಡಿಪ್ರೆಷನ್‌ನಿಂದ ಬಳಲುತ್ತಿದ್ದು, ಅದರಿಂದ ಹೊರಬರಲು ಸಾಕಷ್ಟು ಬಾರಿ ಪ್ರಯತ್ನಿಸಿದರು ಅದರಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂಬುದು ಗೊತ್ತಿದೆ ಆದರೂ ನನ್ನ ಜೀವನವನ್ನು ಅಂತ್ಯ ಮಾಡುತ್ತಿದ್ದೇನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್‌ ಎಂಜಾಯ್‌ ಮಾಡಿ ಎಂದು ಮೂರು ತಿಂಗಳ ಹಿಂದೆ ಡೆತ್‌ ನೋಟ್‌ನಲ್ಲಿ ಬರೆದಿಟ್ಟಿರುವುದು ಕಂಡು ಬಂದಿದೆ.

ಈ ಸಂಬಂಧ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

56 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago