ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ನಹತ್ಯೆಗೆ ಶರಣಾಗರುವ ಘಟನೆ ನಗರದ ಸಂಜಯ್ ನಗರದಲ್ಲಿ ನಡೆದಿದೆ.
ಮೃತ ಮಹಿಳೆ ಚೈತ್ರಾಗೌಡ ಕೆಐಎಡಿಬಿ ಸಹಾಯಕ ಆಯುಕ್ತರಾದ ಶಿವಕುಮಾರ್ ಅವರ ಪತ್ನಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಇದೇ ವೇಳೆ ಅವರು ಮೂರು ತಿಂಗಳ ಹಿಂದೆ ಬರೆದಿಟ್ಟಿದ್ದ ಡೆತ್ ನೋಟ್ ಒಂದು ಸಿಕ್ಕಿದ್ದು, ಅದರಲ್ಲಿ ಚೈತ್ರಗೌಡ ಅವರ ಆತ್ಮಹತ್ಯೆ ಸಂಬಂಧ ಮಾಹಿತಿ ಲಭ್ಯವಾಗಿದೆ.
ಇದೇ ಮಾರ್ಚ್ 11 ರಂದು ಈ ಡೆತ್ ನೋಟ್ ಬರೆದಿದ್ದಾರೆ. ಇದರಲ್ಲಿ ನನ್ನ ಗಂಡ ಒಳ್ಳೆಯವರು, ಜೀವನವನ್ನು ಚೆನ್ನಾಗಿ ಎಂಜಾಯ್ ಮಾಡಿ, ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದಾರೆ.
ನಾನು ಡಿಪ್ರೆಷನ್ನಿಂದ ಬಳಲುತ್ತಿದ್ದು, ಅದರಿಂದ ಹೊರಬರಲು ಸಾಕಷ್ಟು ಬಾರಿ ಪ್ರಯತ್ನಿಸಿದರು ಅದರಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂಬುದು ಗೊತ್ತಿದೆ ಆದರೂ ನನ್ನ ಜೀವನವನ್ನು ಅಂತ್ಯ ಮಾಡುತ್ತಿದ್ದೇನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ ಎಂದು ಮೂರು ತಿಂಗಳ ಹಿಂದೆ ಡೆತ್ ನೋಟ್ನಲ್ಲಿ ಬರೆದಿಟ್ಟಿರುವುದು ಕಂಡು ಬಂದಿದೆ.
ಈ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…