ಅಪರಾಧ

ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ : ಪತಿಯಿಂದ ವ್ಯಕ್ತಿಯ ಕೊಲೆ

ಮಡಿಕೇರಿ : ಅಕ್ರಮ ಸಂಬಂಧದ ಸಂಶಯದಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಲ್ಲದೆ, ವ್ಯಕ್ತಿಯೊಬ್ಬರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ.

ಬಸವನಹಳ್ಳಿಯ ಜಮೀನೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯ ಮುರಳಿ(೪೮) ಕೊಲೆಗೀಡಾಗಿರುವ ವ್ಯಕ್ತಿ. ಬಸವನಹಳ್ಳಿಯ ನಿವಾಸಿ, ಕೂಲಿ ಕಾರ್ಮಿಕ ತೀರ್ಥ(೨೫) ಕೊಲೆ ಅರೋಪಿಯಾಗಿದ್ದು, ತೀರ್ಥನ ಪತ್ನಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸವನಹಳ್ಳಿ ಗ್ರಾಮದ ನಾಗೇಂದ್ರ ಎಂಬವರ ಜಮೀನನ್ನು ಶುಂಠಿ ಕೃಷಿ ಮಾಡಲು ಮಣಿಕಂಠ ಎಂಬವರು ಲೀಸ್‌ಗೆ ಪಡೆದಿದ್ದರು. ೩ ತಿಂಗಳುಗಳ ಹಿಂದೆ ಕೊಪ್ಪ ಬಳಿಯ ರಾಣಿಗೇಟ್‌ನಲ್ಲಿದ್ದ ಕೇರಳ ಮೂಲದ ಮುರಳಿ ಎಂಬವರನ್ನು ಮಣಿಕಂಠ ತಾವು ಲೀಸ್‌ಗೆ ಪಡೆದಿದ್ದ ಜಮೀನಿನಲ್ಲಿ ಒಂದು ಶೆಡ್ ನಿರ್ಮಿಸಿ ಕಾವಲಿಗೆ ನೇಮಿಸಿದ್ದರು.

ಸಮೀಪದಲ್ಲೇ ಆರೋಪಿ ತೀರ್ಥ ಪತ್ನಿ ಜ್ಯೋತಿಯೊಂದಿಗೆ ವಾಸವಿದ್ದನು. ಶುಕ್ರವಾರ ರಾತ್ರಿ ತೀರ್ಥ ಹಾಗೂ ಜ್ಯೋತಿ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ಕೇಳಿ ಮುರಳಿ, ತೀರ್ಥ ಅವರ ಮನೆಯ ಬಳಿ ಬಂದು ವಿಚಾರಿಸಿದ್ದಾರೆ. ಈ ಸಂದರ್ಭ ಜ್ಯೋತಿ ಹಾಗೂ ಮುರಳಿ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನಗೊಂಡ ತೀರ್ಥ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಜ್ಯೋತಿ ಗಂಬೀರವಾಗಿ ಗಾಯಗೊಂಡಿದ್ದರೆ, ಮುರಳಿ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಎಸ್‌ಪಿ ಕೆ. ರಾಮರಾಜನ್ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀರ್ಥನನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

4 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

5 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

7 hours ago