ಅಪರಾಧ

ಮೈಸೂರು | ಶ್ರೀಮಂತರ ಸೋಗಿನಲ್ಲಿ ಪೀಠೋಪಕರಣ ಖರೀದಿಗೆ ಬಂದ ಕುಟುಂಬ : ಮಳಿಗೆ ಮಾಲೀಕನಿಗೆ 99.65 ಲಕ್ಷ ರೂ. ವಂಚನೆ

ಮೈಸೂರು : ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ ೯೯.೬೫ ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ಟ್ರೀ ಟ್ರೆಂಡ್ಸ್ ಅಂಗಡಿ ಮಾಲೀಕ ಎ.ಸಿ.ರಾಯ್ ವಂಚನೆಗೆ ಒಳಗಾದವರು. ಕೇರಳಾ ರಾಜ್ಯ ಕ್ಯಾಲಿಕಟ್‌ನ ಹಕ್ಕಿನ್, ಹಫ್ತಾತ್ ಬೀವಿ, ಮೊಹಮದ್ ಖಾಲೀಸ್, ಮೊಹಮದ್ ವಾಸೀಲ್, ಫರ್ವೀಜ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

ಶ್ರೀಮಂತರ ಸೋಗಿನಲ್ಲಿ ಐಶಾರಾಮಿ ಕಾರಿನಲ್ಲಿ ಫರ್ನಿಚರ್ ಅಂಗಡಿಗೆ ಬಂದ ಹಕ್ಕಿನ್ ಹಾಗೂ ಕುಟುಂಬ ತಾನು ಕೇರಳಾದಲ್ಲಿ ಎರಡು ಮನೆ ಖರೀದಿಸಿದ್ದು ಫರ್ನಿಚರ್‌ಗಳು ಬೇಕೆಂದು ನಂಬಿಸಿದೆ. ವಾಟ್ಸಪ್ ವೀಡಿಯೋ ಕಾಲ್‌ನಲ್ಲಿ ತನ್ನ ಮನೆಯನ್ನ ತೋರಿಸಿ ಇಂಜಿನಿಯರ್ ಜೊತೆ ಮಾತನಾಡಿಸಿದ್ದಾರೆ.

ಹೆಚ್ಚು ಬೆಲೆ ಬಾಳುವ ಪೀಠೋಪಕರಣಗಳನ್ನ ಖರೀದಿಸಿದೆ. ೪೦ ಲಕ್ಷ ರೂ. ಮೌಲ್ಯದ ಫರ್ನಿಚರ್ ಖರೀದಿಸಿ ಪ್ಯಾಕ್ ಮಾಡುವಂತೆ ತಿಳಿಸಿ ಖಾಲಿ ಚೆಕ್‌ಗಳನ್ನ ನೀಡಿದ್ದಾರೆ. ತಾನು ಹೇಳಿದ ದಿನ ಚೆಕ್‌ನ್ನು ಬ್ಯಾಂಕ್ ಗೆ ಹಾಕುವಂತೆ ತಿಳಿಸಿ, ಹಣ ಬಂದ ನಂತರ ಫರ್ನಿಚರ್‌ಗಳನ್ನು ಕಳುಹಿಸುವಂತೆ ಸೂಚನೆ ನೀಡಿ ತೆರಳಿದ್ದಾರೆ.

ಇದನ್ನೂ ಓದಿ:-ಸಮಾಜದಲ್ಲಿ ಪುರುಷ-ಮಹಿಳೆಯರು ಸಮಾನರು : ಶಾಸಕ ಜಿಟಿಡಿ

ಒಂದೆರಡು ದಿನಗಳ ನಂತರ ಖಾಲಿ ಚೆಕ್‌ನಲ್ಲಿ ೪೦ ಲಕ್ಷ ರೂ. ತುಂಬಿ ಹಕ್ಕಿನ್‌ನ ಅನುಮತಿಯಂತೆ ಬ್ಯಾಂಕ್‌ಗೆ ನಗದೀಕರಿಸಲು ಹಾಕಿದ್ದಾರೆ. ಆದರೆ, ಚೆಕ್ ಹಣವಿಲ್ಲದೆ ಬೌನ್ಸ್ ಆಗಿದೆ. ಈ ವಿಚಾರ ಹಕ್ಕಿನ್‌ಗೆ ತಿಳಿಸಿದಾಗ ತಾನೇ ಬರುವುದಾಗಿ ತಿಳಿಸಿದ್ದಾನೆ.

ಕೆಲವು ದಿನಗಳ ನಂತರ ಅಂಗಡಿಗೆ ಬಂದ ಹಕ್ಕಿನ್ ತನ್ನ ಖಾತೆಯಲ್ಲಿ ೧೨೪ ಕೋಟಿ ರೂ. ಹಣವಿದೆ. ಐಟಿ ಅಧಿಕಾರಿಗಳು ಖಾತೆಯನ್ನು ಫ್ರೀಜ್ ಮಾಡಿದ್ದಾರೆ. ಇದರಿಂದ ಚೆಕ್ ಬೌನ್ಸ್ ಆಗಿದೆ ಎಂದು ಹೇಳಿ ಹಲವಾರು ದಾಖಲೆಗಳನ್ನ ತೋರಿಸಿ ನಂಬಿಸಿದ್ದಾನೆ.

ಅಕೌಂಟ್ ಅನ್‌ಫ್ರೀಜ್ ಆದರೆ ನಿನ್ನ ಬಳಿಯೇ ಫರ್ನಿಚರ್‌ಗಳನ್ನ ಖರೀದಿ ಮಾಡುತ್ತೇನೆ. ಅಲ್ಲದೆ ತನಗೆ ಬರುವ ಹಣದಲ್ಲಿ ಶೇ.೨೫ ಕಮೀಷನ್ ಸಹ ಕೊಡುವುದಾಗಿ ಆಮಿಷವೊಡ್ಡಿದ ಹಕ್ಕಿನ್ ರಾಯ್ ಅವರನ್ನು ನಂಬಿಸಿ ಅಕೌಂಟ್ ಅನ್ ಫ್ರೀಜ್ ಮಾಡಲು ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ.

ಹಕ್ಕಿನ್ ತೋರಿಸಿದ ದಾಖಲೆಗಳನ್ನು ನಂಬಿದ ರಾಯ್ ಹಂತ ಹಂತವಾಗಿ ೯೯,೬೫,೫೦೦ ರೂ. ಹಣ ಕೊಟ್ಟಿದ್ದಾರೆ. ಲಕ್ಷಾಂತರ ಹಣ ಬಂದ ನಂತರ ಹಕ್ಕಿನ್ ಈ ಸಮಸ್ಯೆಗೆ ಇಲ್ಲಿ ಪರಿಹಾರ ಸಿಗುವುದಿಲ್ಲ ದೆಹಲಿಯಿಂದಲೇ ಬಗೆಹರಿಸಬೇಕೆಂದು ಮತ್ತಷ್ಟು ಹಣದ ಸಹಾಯ ಕೇಳಿದ್ದಾನೆ.

ಈ ಸಂಧರ್ಭದಲ್ಲಿ ರಾಯ್ ಅವರಿಗೆ ತಾವು ಮೋಸ ಹೋಗಿರುವುದು ಖಚಿತವಾಗಿದೆ. ಸಧ್ಯ ಹಕ್ಕಿನ್ ಸೇರಿದಂತೆ ಕುಟುಂಬದ ೫ ವಿರುದ್ದ ರಾಯ್ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

7 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

9 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

10 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

10 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

11 hours ago