ಅಪರಾಧ

ಮೈಸೂರು | ಶ್ರೀಮಂತರ ಸೋಗಿನಲ್ಲಿ ಪೀಠೋಪಕರಣ ಖರೀದಿಗೆ ಬಂದ ಕುಟುಂಬ : ಮಳಿಗೆ ಮಾಲೀಕನಿಗೆ 99.65 ಲಕ್ಷ ರೂ. ವಂಚನೆ

ಮೈಸೂರು : ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ ೯೯.೬೫ ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ಟ್ರೀ ಟ್ರೆಂಡ್ಸ್ ಅಂಗಡಿ ಮಾಲೀಕ ಎ.ಸಿ.ರಾಯ್ ವಂಚನೆಗೆ ಒಳಗಾದವರು. ಕೇರಳಾ ರಾಜ್ಯ ಕ್ಯಾಲಿಕಟ್‌ನ ಹಕ್ಕಿನ್, ಹಫ್ತಾತ್ ಬೀವಿ, ಮೊಹಮದ್ ಖಾಲೀಸ್, ಮೊಹಮದ್ ವಾಸೀಲ್, ಫರ್ವೀಜ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

ಶ್ರೀಮಂತರ ಸೋಗಿನಲ್ಲಿ ಐಶಾರಾಮಿ ಕಾರಿನಲ್ಲಿ ಫರ್ನಿಚರ್ ಅಂಗಡಿಗೆ ಬಂದ ಹಕ್ಕಿನ್ ಹಾಗೂ ಕುಟುಂಬ ತಾನು ಕೇರಳಾದಲ್ಲಿ ಎರಡು ಮನೆ ಖರೀದಿಸಿದ್ದು ಫರ್ನಿಚರ್‌ಗಳು ಬೇಕೆಂದು ನಂಬಿಸಿದೆ. ವಾಟ್ಸಪ್ ವೀಡಿಯೋ ಕಾಲ್‌ನಲ್ಲಿ ತನ್ನ ಮನೆಯನ್ನ ತೋರಿಸಿ ಇಂಜಿನಿಯರ್ ಜೊತೆ ಮಾತನಾಡಿಸಿದ್ದಾರೆ.

ಹೆಚ್ಚು ಬೆಲೆ ಬಾಳುವ ಪೀಠೋಪಕರಣಗಳನ್ನ ಖರೀದಿಸಿದೆ. ೪೦ ಲಕ್ಷ ರೂ. ಮೌಲ್ಯದ ಫರ್ನಿಚರ್ ಖರೀದಿಸಿ ಪ್ಯಾಕ್ ಮಾಡುವಂತೆ ತಿಳಿಸಿ ಖಾಲಿ ಚೆಕ್‌ಗಳನ್ನ ನೀಡಿದ್ದಾರೆ. ತಾನು ಹೇಳಿದ ದಿನ ಚೆಕ್‌ನ್ನು ಬ್ಯಾಂಕ್ ಗೆ ಹಾಕುವಂತೆ ತಿಳಿಸಿ, ಹಣ ಬಂದ ನಂತರ ಫರ್ನಿಚರ್‌ಗಳನ್ನು ಕಳುಹಿಸುವಂತೆ ಸೂಚನೆ ನೀಡಿ ತೆರಳಿದ್ದಾರೆ.

ಇದನ್ನೂ ಓದಿ:-ಸಮಾಜದಲ್ಲಿ ಪುರುಷ-ಮಹಿಳೆಯರು ಸಮಾನರು : ಶಾಸಕ ಜಿಟಿಡಿ

ಒಂದೆರಡು ದಿನಗಳ ನಂತರ ಖಾಲಿ ಚೆಕ್‌ನಲ್ಲಿ ೪೦ ಲಕ್ಷ ರೂ. ತುಂಬಿ ಹಕ್ಕಿನ್‌ನ ಅನುಮತಿಯಂತೆ ಬ್ಯಾಂಕ್‌ಗೆ ನಗದೀಕರಿಸಲು ಹಾಕಿದ್ದಾರೆ. ಆದರೆ, ಚೆಕ್ ಹಣವಿಲ್ಲದೆ ಬೌನ್ಸ್ ಆಗಿದೆ. ಈ ವಿಚಾರ ಹಕ್ಕಿನ್‌ಗೆ ತಿಳಿಸಿದಾಗ ತಾನೇ ಬರುವುದಾಗಿ ತಿಳಿಸಿದ್ದಾನೆ.

ಕೆಲವು ದಿನಗಳ ನಂತರ ಅಂಗಡಿಗೆ ಬಂದ ಹಕ್ಕಿನ್ ತನ್ನ ಖಾತೆಯಲ್ಲಿ ೧೨೪ ಕೋಟಿ ರೂ. ಹಣವಿದೆ. ಐಟಿ ಅಧಿಕಾರಿಗಳು ಖಾತೆಯನ್ನು ಫ್ರೀಜ್ ಮಾಡಿದ್ದಾರೆ. ಇದರಿಂದ ಚೆಕ್ ಬೌನ್ಸ್ ಆಗಿದೆ ಎಂದು ಹೇಳಿ ಹಲವಾರು ದಾಖಲೆಗಳನ್ನ ತೋರಿಸಿ ನಂಬಿಸಿದ್ದಾನೆ.

ಅಕೌಂಟ್ ಅನ್‌ಫ್ರೀಜ್ ಆದರೆ ನಿನ್ನ ಬಳಿಯೇ ಫರ್ನಿಚರ್‌ಗಳನ್ನ ಖರೀದಿ ಮಾಡುತ್ತೇನೆ. ಅಲ್ಲದೆ ತನಗೆ ಬರುವ ಹಣದಲ್ಲಿ ಶೇ.೨೫ ಕಮೀಷನ್ ಸಹ ಕೊಡುವುದಾಗಿ ಆಮಿಷವೊಡ್ಡಿದ ಹಕ್ಕಿನ್ ರಾಯ್ ಅವರನ್ನು ನಂಬಿಸಿ ಅಕೌಂಟ್ ಅನ್ ಫ್ರೀಜ್ ಮಾಡಲು ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ.

ಹಕ್ಕಿನ್ ತೋರಿಸಿದ ದಾಖಲೆಗಳನ್ನು ನಂಬಿದ ರಾಯ್ ಹಂತ ಹಂತವಾಗಿ ೯೯,೬೫,೫೦೦ ರೂ. ಹಣ ಕೊಟ್ಟಿದ್ದಾರೆ. ಲಕ್ಷಾಂತರ ಹಣ ಬಂದ ನಂತರ ಹಕ್ಕಿನ್ ಈ ಸಮಸ್ಯೆಗೆ ಇಲ್ಲಿ ಪರಿಹಾರ ಸಿಗುವುದಿಲ್ಲ ದೆಹಲಿಯಿಂದಲೇ ಬಗೆಹರಿಸಬೇಕೆಂದು ಮತ್ತಷ್ಟು ಹಣದ ಸಹಾಯ ಕೇಳಿದ್ದಾನೆ.

ಈ ಸಂಧರ್ಭದಲ್ಲಿ ರಾಯ್ ಅವರಿಗೆ ತಾವು ಮೋಸ ಹೋಗಿರುವುದು ಖಚಿತವಾಗಿದೆ. ಸಧ್ಯ ಹಕ್ಕಿನ್ ಸೇರಿದಂತೆ ಕುಟುಂಬದ ೫ ವಿರುದ್ದ ರಾಯ್ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago