ಅಪರಾಧ

ಲಂಚಕ್ಕೆ ಬೇಡಿಕೆಯಿಟ್ಟದ್ದ ಆರೋಪ ದೃಢ: ವೈದ್ಯನಿಗೆ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ

ಮೈಸೂರು: ನಗರದ ಕೆ.ಆರ್‌ ಆಸ್ಪತ್ರೆಯ ವೈದ್ಯರೊಬ್ಬರು ಶಸ್ತ್ರ ಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದ್ದು, ಈ ಆರೋಪ ಸಾಬೀತಾದ ಹಿನ್ನಲೆ, ಕೆ.ಆರ್‌ ಆಸ್ಪತ್ರೆಯ ಮೂಳೆ ಶಸ್ತ್ರ ಚಿಕಿತ್ಸಕ ಡಾ. ಪುಟ್ಟಸ್ವಾಮಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಅಪರ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಧೀಶರ ನ್ಯಾಯಾಲಯ ತಿರ್ಪು ನೀಡಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಕೂಡಿಗೆ ಹಳ್ಳಿ ನಿವಾಸಿ ಎಸ್‌.ಆರ್‌ ದೇವರಾಜು ಎಂಬುವವರು ದೂರು ನೀಡಿದ್ದವರು. ಏಪ್ರಿಲ್‌ 12, 2017 ರಂದು ಶಸ್ತ್ರ ಚಿಕಿತ್ಸೆ ಮಾಡಲು 40 ಸಾವಿರ ರೂಗಳ ಲಂಚ ನೀಡಲು ಬೇಡಿಕೆಯಿಟ್ಟಿದ್ದರು ಎಂದು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನಲೆ, ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ 1988 13(1) ಅಡಿಯಲ್ಲ 3 ವರ್ಷ ಜೈಲು, 25 ಸಾವಿರ ದಂಡ, ದಂಡ ತಪ್ಪಿದ್ದಲ್ಲಿ 6 ತಿಂಗಳ ಸಜೆ, 13(2) ಅಡಿಯಲ್ಲಿ 4 ವರ್ಷ ಜೈಲು ಮತ್ತು 50 ಸಾವಿರ ದಂಡ, ದಂಡ ಕಟ್ಟಲು ಆಗದಿದ್ದಲ್ಲಿ 6 ತಿಂಗಳ ಸಾಧಾರಣ ಸಜೆ ವಿಧಿಸಿ ಕೋರ್ಟ್‌ ತೀರ್ಪು ನೀಡಿದೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

27 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

31 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

2 hours ago