ಮೈಸೂರು: ನಗರದ ಕೆ.ಆರ್ ಆಸ್ಪತ್ರೆಯ ವೈದ್ಯರೊಬ್ಬರು ಶಸ್ತ್ರ ಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದ್ದು, ಈ ಆರೋಪ ಸಾಬೀತಾದ ಹಿನ್ನಲೆ, ಕೆ.ಆರ್ ಆಸ್ಪತ್ರೆಯ ಮೂಳೆ ಶಸ್ತ್ರ ಚಿಕಿತ್ಸಕ ಡಾ. ಪುಟ್ಟಸ್ವಾಮಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಅಪರ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಧೀಶರ ನ್ಯಾಯಾಲಯ ತಿರ್ಪು ನೀಡಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೂಡಿಗೆ ಹಳ್ಳಿ ನಿವಾಸಿ ಎಸ್.ಆರ್ ದೇವರಾಜು ಎಂಬುವವರು ದೂರು ನೀಡಿದ್ದವರು. ಏಪ್ರಿಲ್ 12, 2017 ರಂದು ಶಸ್ತ್ರ ಚಿಕಿತ್ಸೆ ಮಾಡಲು 40 ಸಾವಿರ ರೂಗಳ ಲಂಚ ನೀಡಲು ಬೇಡಿಕೆಯಿಟ್ಟಿದ್ದರು ಎಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನಲೆ, ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ 1988 13(1) ಅಡಿಯಲ್ಲ 3 ವರ್ಷ ಜೈಲು, 25 ಸಾವಿರ ದಂಡ, ದಂಡ ತಪ್ಪಿದ್ದಲ್ಲಿ 6 ತಿಂಗಳ ಸಜೆ, 13(2) ಅಡಿಯಲ್ಲಿ 4 ವರ್ಷ ಜೈಲು ಮತ್ತು 50 ಸಾವಿರ ದಂಡ, ದಂಡ ಕಟ್ಟಲು ಆಗದಿದ್ದಲ್ಲಿ 6 ತಿಂಗಳ ಸಾಧಾರಣ ಸಜೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…