ಮೈಸೂರು: ನಗರದ ಕೆ.ಆರ್ ಆಸ್ಪತ್ರೆಯ ವೈದ್ಯರೊಬ್ಬರು ಶಸ್ತ್ರ ಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದ್ದು, ಈ ಆರೋಪ ಸಾಬೀತಾದ ಹಿನ್ನಲೆ, ಕೆ.ಆರ್ ಆಸ್ಪತ್ರೆಯ ಮೂಳೆ ಶಸ್ತ್ರ ಚಿಕಿತ್ಸಕ ಡಾ. ಪುಟ್ಟಸ್ವಾಮಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಅಪರ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಧೀಶರ ನ್ಯಾಯಾಲಯ ತಿರ್ಪು ನೀಡಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೂಡಿಗೆ ಹಳ್ಳಿ ನಿವಾಸಿ ಎಸ್.ಆರ್ ದೇವರಾಜು ಎಂಬುವವರು ದೂರು ನೀಡಿದ್ದವರು. ಏಪ್ರಿಲ್ 12, 2017 ರಂದು ಶಸ್ತ್ರ ಚಿಕಿತ್ಸೆ ಮಾಡಲು 40 ಸಾವಿರ ರೂಗಳ ಲಂಚ ನೀಡಲು ಬೇಡಿಕೆಯಿಟ್ಟಿದ್ದರು ಎಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನಲೆ, ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ 1988 13(1) ಅಡಿಯಲ್ಲ 3 ವರ್ಷ ಜೈಲು, 25 ಸಾವಿರ ದಂಡ, ದಂಡ ತಪ್ಪಿದ್ದಲ್ಲಿ 6 ತಿಂಗಳ ಸಜೆ, 13(2) ಅಡಿಯಲ್ಲಿ 4 ವರ್ಷ ಜೈಲು ಮತ್ತು 50 ಸಾವಿರ ದಂಡ, ದಂಡ ಕಟ್ಟಲು ಆಗದಿದ್ದಲ್ಲಿ 6 ತಿಂಗಳ ಸಾಧಾರಣ ಸಜೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…