bus accident (1)
ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ.
ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಓಡಿಸುತ್ತಿದ್ದ ಸೋಮಶೇಖರ್ ಎಡ ಭಾಗಕ್ಕೆ ಬಿದ್ದರೆ, ಹಿಂಬದಿ ಸವಾರ ಹಳ್ಳಿಕೆರೆ ಗ್ರಾಮದ ನಿವಾಸಿ ಶಿವಪ್ಪ (೬೪) ಬಸ್ ಚಕ್ರದ ಕೆಳಗಡೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಓಡಿಸುತ್ತಿದ್ದ ಸೋಮಶೇಖರ್ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಗು ಸಾವು
ಹೆದ್ದಾರಿಯ ಮಧುಗಿರಿಕೊಪ್ಪಲು ಬಳಿ ದ್ವಿಚಕ್ರ ವಾಹನಕ್ಕೆ ಕೊಡಗಿನ ಕಡೆಗೆ ಹೂವು ತುಂಬಿಕೊಂಡು ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಮಹದೇಶ್ವರ ಕಾಲೋನಿ ನಿವಾಸಿ ಸೋಮೇಶ್ ಅವರ ಮಗು ವೇದಾಂತ್ (೩) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದೆ. ಸೋಮೇಶ್ ಅವರ ಪತ್ನಿ ಅಮೂಲ್ಯ, ಪುತ್ರಿ ಅನುಶ್ರೀ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡ-ಹೆಂಡತಿ ತಮ್ಮ ಇಬ್ಬರು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಕನಕಪುರ ತಾಲ್ಲೂಕಿನ ಯರೇಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು ಎಂದು ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎರಡೂ ಪ್ರಕರಣಗಳು ದಾಖಲಾಗಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…