ಅಪರಾಧ

ಪ್ರತ್ಯೇಕ ಅಪಘಾತ | ಮಗು ಸೇರಿ ಇಬ್ಬರ ಸಾವು

ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ.

ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಓಡಿಸುತ್ತಿದ್ದ ಸೋಮಶೇಖರ್ ಎಡ ಭಾಗಕ್ಕೆ ಬಿದ್ದರೆ, ಹಿಂಬದಿ ಸವಾರ ಹಳ್ಳಿಕೆರೆ ಗ್ರಾಮದ ನಿವಾಸಿ ಶಿವಪ್ಪ (೬೪) ಬಸ್ ಚಕ್ರದ ಕೆಳಗಡೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಓಡಿಸುತ್ತಿದ್ದ ಸೋಮಶೇಖರ್ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗು ಸಾವು

ಹೆದ್ದಾರಿಯ ಮಧುಗಿರಿಕೊಪ್ಪಲು ಬಳಿ ದ್ವಿಚಕ್ರ ವಾಹನಕ್ಕೆ ಕೊಡಗಿನ ಕಡೆಗೆ ಹೂವು ತುಂಬಿಕೊಂಡು ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಮಹದೇಶ್ವರ ಕಾಲೋನಿ ನಿವಾಸಿ ಸೋಮೇಶ್ ಅವರ ಮಗು ವೇದಾಂತ್ (೩) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದೆ. ಸೋಮೇಶ್ ಅವರ ಪತ್ನಿ ಅಮೂಲ್ಯ, ಪುತ್ರಿ ಅನುಶ್ರೀ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡ-ಹೆಂಡತಿ ತಮ್ಮ ಇಬ್ಬರು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಕನಕಪುರ ತಾಲ್ಲೂಕಿನ ಯರೇಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು ಎಂದು ಇನ್‌ಸ್ಪೆಕ್ಟರ್ ಸಂತೋಷ್‌ ಕಶ್ಯಪ್ ತಿಳಿಸಿದರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎರಡೂ ಪ್ರಕರಣಗಳು ದಾಖಲಾಗಿವೆ.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

4 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

4 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

6 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

7 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

8 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

11 hours ago