ಅಪರಾಧ

ಪ್ರತ್ಯೇಕ ಪ್ರಕರಣ | 11 ಲಕ್ಷ ರೂ.ವಂಚನೆ

ಮೈಸೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನ್‌ಲೈನ್ ವಂಚನೆಗೆ ಒಳಗಾಗಿರುವ ಮೂವರು ಸುಮಾರು ೧೧ಲಕ್ಷ ರೂ. ಗಳನ್ನು ವಂಚಕರ ಖಾತೆಗೆ ಜಮೆ ಮಾಡಿ ಹಣ ಕಳೆದುಕೊಂಡಿದ್ದಾರೆ.

ಮೊದಲನೇ ಪ್ರಕರಣದಲ್ಲಿ ಆಲನಹಳ್ಳಿ ನಿವಾಸಿ ಯುವಕ ಆನ್‌ಲೈನ್ ಮೂಲಕ ಕೆಲಸ ಪಡೆದುಕೊಂಡಿದ್ದಾರೆ. ನಂತರ ಕಂಪೆನಿಯವರು ನೀವು ಮಾಡಿರುವ ಉತ್ತಮ ಕೆಲಸಕ್ಕೆ ಹಣ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ನಂತರ ನೀವು ನಿಮ್ಮ ಖಾತೆಗೆ ಹಣ ಪಡೆದುಕೊಳ್ಳಬೇಕಾದಲ್ಲಿ ಸ್ವಲ್ಪ ಹಣವನ್ನು ಜಮೆ ಮಾಡಬೇಕು ಎಂದು ಹೇಳಿದ್ದಾರೆ. ಅವರ ಮಾತನ್ನು ನಂಬಿದ ಯುವಕ ಹಂತ ಹಂತವಾಗಿ ೨.೦೯ ಲಕ್ಷ ರೂ. ಹಾಕಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

೨ನೇ ಪ್ರಕರಣದಲ್ಲಿ ಹೆಬ್ಬಾಳು ನಿವಾಸಿಯೊಬ್ಬರು ವಾಟ್ಸಾಪ್ ಗ್ರೂಪ್‌ನ ಮೂಲಕ ಬಂದ ಸಂದೇಶವನ್ನು ನಂಬಿ ಆನ್‌ಲೈನ್ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ನಂತರ ಅವರು ಅಲ್ಲಿದ್ದ ಮೊಬೈಲ್ ಸಂಖ್ಯೆಯ ಮೂಲಕ ದುಷ್ಕರ್ಮಿಗಳನ್ನು ಸಂಪರ್ಕಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ದುಷ್ಕರ್ಮಿಗಳು ಅವರಿಗೆ ಸಲಹೆ ನೀಡಿದ್ದಾರೆ. ನಂತರ ಅವರ ಮಾತನ್ನು ನಂಬಿ ಹಂತ ಹಂತವಾಗಿ ೫,೭೦,೯೭೨ ರೂ. ಗಳನ್ನು ಅವರು ಹೇಳಿದ ಖಾತೆಗೆ ಹಾಕಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

೩ನೇ ಪ್ರಕರಣದಲ್ಲಿ ನಗರದ ಕೆ.ಸಿ. ಬಡಾವಣೆ ನಿವಾಸಿ ಮಹಿಳೆಯೊಬ್ಬರು ಟೆಲಿಗ್ರಾಮ್ ವೀಕ್ಷಿಸುತ್ತಿದ್ದ ವೇಳೆ ಷೇರು ಮಾರುಕಟ್ಟೆ ಬಗ್ಗೆ ಮಾಹಿತಿ ಬಂದಿದೆ. ನಂತರ ಅಲ್ಲಿಯ ಗ್ರೂಪ್‌ಗೆ ಸೇರಿದ್ದಾರೆ.
ಮೊಬೈಲ್ ಮೂಲಕ ಅಲ್ಲಿನ ವ್ಯಕ್ತಿಗಳನ್ನು ಸಂಪರ್ಕಿಸಿದ್ದಾರೆ. ಅವರು ಹೇಳಿದಂತೆ ಹಂತ ಹಂತವಾಗಿ ೩.೪೯ ಲಕ್ಷ ರೂ.ಗಳನ್ನು ಅನಾಮಿಕರು ಹೇಳಿದ ಖಾತೆಗೆ ವರ್ಗಾವಣೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ನಜರ್‌ಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago