theft
ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಸ್ಸಾಂ ರಾಜ್ಯ ಮೂಲದ ಚಿಕ್ಕಮಗಳೂರು ಜಿಲ್ಲೆ ತೇಗೂರು ಗಾದ ನಿವಾಸಿಯಾದ ಜೋಹುರ್ ಆಲಿ(೨೮) ಬಂಧಿತ ಆರೋಪಿ. ಕಳೆದ ಸೆ.೨೪ರಂದು ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫಲೀಲ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ವಿವಿಧ ಕಂಪನಿಯ ಅಂದಾಜು ೩೨ ಹೊಸ ಮೊಬೈಲ್ ಫೋನ್ಗಳು ಮತ್ತು ೩೦೦೦ ನಗದು ರೂ. ಕಳವು ಮಾಡಿರುವ ಕುರಿತು ದೂರು ಸ್ವೀಕರಿಸಲಾಗಿತ್ತು. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆ ನಡೆಸಿದ ತಂಡ ಮಾಹಿತಿ ಸಂಗ್ರಹಿಸಿ ಗುರುವಾರ ಚಿಕ್ಕಮಗಳೂರು ಜಿಲ್ಲೆ ತೇಗೂರು ಗ್ರಾಮದ ನಿವಾಸಿ ಜೋಹುರ್ ಆಲಿ ಎಂಬಾತನನ್ನು ಬಂಧಿಸಿ ೩೨ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ಉಪವಿಭಾಗ ಡಿಎಸ್ಪಿ ಮಹೇಶ್ಕುಮಾರ್, ಗೋಣಿಕೊಪ್ಪ ಸಿಪಿಐ ಶಿವರಾಜ ಆರ್ ಮುಧೋಳ್, ಪಿಎಸ್ಐ ಪ್ರದೀಪ್ ಕುಮಾರ್.ಬಿ.ಕೆ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…