ಅಪರಾಧ

ಟ್ರ್ಯಾಕ್ಟರ್-ಬೈಕ್ ಡಿಕ್ಕಿ : ಯುವಕ ಸಾವು

ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ನೀರಿನ ಟ್ಯಾಂಕ್‌ರ್‌ನೊಂದಿಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ಸೋಮವಾರ ಬೆಳಿಗ್ಗೆ 9.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಟಿ. ನರಸೀಪುರ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ನಿತಿನ್ ಎಂಬವರೇ ಅಪಘಾತದಲ್ಲಿ ಮೃತಪಟ್ಟವರು.

ಇದನ್ನೂ ಓದಿ:-ಮೈ-ಬೆಂ ಹೆದ್ದಾರಿಯ ಸರ್ವಿಸ್‌ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ

ನಿತಿನ್ ಅವರು ಕಚೇರಿಗೆ ಹೋಗುವ ಸಲುವಾಗಿ ಸೇಂಟ್ ಮೇರಿ ಶಾಲೆಯ(ಜೆಎಸ್‌ಎಸ್ ಜಂಕ್ಷನ್ ಸಿಗ್ನಲ್) ಬಳಿ ತನ್ನ ಬೈಕನ್ನು ನಿಲ್ಲಿಸಿಕೊಂಡು ಟ್ರಾಫಿಕ್ ಲೈಟ್‌ನಲ್ಲಿ ಹಸಿರು ಸಿಗ್ನಲ್‌ಗಾಗಿ ಕಾಯುತ್ತಿದ್ದಾಗ, ವೇಗವಾಗಿ ಬಂದ ಟ್ರ್ಯಾಕ್ಟರ್ ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಈ ವೇಳೆ ನಿತಿನ್ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಟ್ರ್ಯಾಕ್ಟರ್ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ನಿತಿನ್ ತಲೆಗೆ ಗಂಭೀರ ಗಾಯಗಳಾಗಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆದ್ದರೆ, ನೀರಿನ ಟ್ಯಾಂಕ್ ಜೊತೆಗೆ ಟ್ರ್ಯಾಕ್ಟರ್ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ. ಈ ಸಂಬಂದ ಕೆ.ಆರ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

10 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

10 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

11 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

12 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

12 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

13 hours ago