ಅಪರಾಧ

ಟ್ರ್ಯಾಕ್ಟರ್-ಬೈಕ್ ಡಿಕ್ಕಿ : ಯುವಕ ಸಾವು

ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ನೀರಿನ ಟ್ಯಾಂಕ್‌ರ್‌ನೊಂದಿಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ಸೋಮವಾರ ಬೆಳಿಗ್ಗೆ 9.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಟಿ. ನರಸೀಪುರ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ನಿತಿನ್ ಎಂಬವರೇ ಅಪಘಾತದಲ್ಲಿ ಮೃತಪಟ್ಟವರು.

ಇದನ್ನೂ ಓದಿ:-ಮೈ-ಬೆಂ ಹೆದ್ದಾರಿಯ ಸರ್ವಿಸ್‌ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ

ನಿತಿನ್ ಅವರು ಕಚೇರಿಗೆ ಹೋಗುವ ಸಲುವಾಗಿ ಸೇಂಟ್ ಮೇರಿ ಶಾಲೆಯ(ಜೆಎಸ್‌ಎಸ್ ಜಂಕ್ಷನ್ ಸಿಗ್ನಲ್) ಬಳಿ ತನ್ನ ಬೈಕನ್ನು ನಿಲ್ಲಿಸಿಕೊಂಡು ಟ್ರಾಫಿಕ್ ಲೈಟ್‌ನಲ್ಲಿ ಹಸಿರು ಸಿಗ್ನಲ್‌ಗಾಗಿ ಕಾಯುತ್ತಿದ್ದಾಗ, ವೇಗವಾಗಿ ಬಂದ ಟ್ರ್ಯಾಕ್ಟರ್ ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಈ ವೇಳೆ ನಿತಿನ್ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಟ್ರ್ಯಾಕ್ಟರ್ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ನಿತಿನ್ ತಲೆಗೆ ಗಂಭೀರ ಗಾಯಗಳಾಗಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆದ್ದರೆ, ನೀರಿನ ಟ್ಯಾಂಕ್ ಜೊತೆಗೆ ಟ್ರ್ಯಾಕ್ಟರ್ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ. ಈ ಸಂಬಂದ ಕೆ.ಆರ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago