accident (1)
ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ನೀರಿನ ಟ್ಯಾಂಕ್ರ್ನೊಂದಿಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ 9.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಟಿ. ನರಸೀಪುರ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ನಿತಿನ್ ಎಂಬವರೇ ಅಪಘಾತದಲ್ಲಿ ಮೃತಪಟ್ಟವರು.
ಇದನ್ನೂ ಓದಿ:-ಮೈ-ಬೆಂ ಹೆದ್ದಾರಿಯ ಸರ್ವಿಸ್ ರಸ್ತೆ ಸಮಸ್ಯೆ ಪರಿಶೀಲಿಸಿದ ಶಾಸಕ : ಅಭಿವೃದ್ಧಿ ಕೆಲಸಕ್ಕೆ ಸೂಚನೆ
ನಿತಿನ್ ಅವರು ಕಚೇರಿಗೆ ಹೋಗುವ ಸಲುವಾಗಿ ಸೇಂಟ್ ಮೇರಿ ಶಾಲೆಯ(ಜೆಎಸ್ಎಸ್ ಜಂಕ್ಷನ್ ಸಿಗ್ನಲ್) ಬಳಿ ತನ್ನ ಬೈಕನ್ನು ನಿಲ್ಲಿಸಿಕೊಂಡು ಟ್ರಾಫಿಕ್ ಲೈಟ್ನಲ್ಲಿ ಹಸಿರು ಸಿಗ್ನಲ್ಗಾಗಿ ಕಾಯುತ್ತಿದ್ದಾಗ, ವೇಗವಾಗಿ ಬಂದ ಟ್ರ್ಯಾಕ್ಟರ್ ಬೈಕ್ಗೆ ಢಿಕ್ಕಿ ಹೊಡೆದಿದೆ.
ಈ ವೇಳೆ ನಿತಿನ್ ಅವರು ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಟ್ರ್ಯಾಕ್ಟರ್ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ನಿತಿನ್ ತಲೆಗೆ ಗಂಭೀರ ಗಾಯಗಳಾಗಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆದ್ದರೆ, ನೀರಿನ ಟ್ಯಾಂಕ್ ಜೊತೆಗೆ ಟ್ರ್ಯಾಕ್ಟರ್ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ. ಈ ಸಂಬಂದ ಕೆ.ಆರ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…