ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅರೋಪಿಯಾಗಿದ್ದು, ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಬೇಕು ಎಂದು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಮಾಜಿ ಸಿಎಂ ಬಿಎಸ್ವೈ ವಿರುದ್ಧ ಅವರ ಅಣ್ಣ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಕೋರ್ಟ್ನಿಂದ ವಿಚಾರಣೆಯಷ್ಟೆ ನಿಗದಿಯಾಗಬೇಕಿದೆ.
ಪ್ರಕರಣವಿದು?: 53 ವರ್ಷದ ಮಹಿಳೆಯೊಬ್ಬರು ತನ್ನ ಮಗಳ ಮೇಲೆ ಅತ್ಯಾಚಾರ ನಡೆದಿದೆ ನನಗೆ ನ್ಯಾಯ ಕೊಡಿಸಿ ಎಂದು 2024ರ ಮಾರ್ಚ್ 14 ರಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ 354(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದಲ್ಲಿ ದೂರು ನೀಡಿದ ಸಂತ್ರಸ್ತೆಯ ತಾಯಿ ಮರಣ ಹೊಂದಿದ ಬಳಿಕ ಸಂತ್ರಸ್ತೆ ಅಣ್ಣ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಈ ಸಂಬಂಧ ಸದಾಶಿವ ನಗರದಲ್ಲಿ ಬಿಎಸ್ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಸಿಐಡಿ ಅಧಿಕಾರಿಗಳು ಬಿಎಸ್ವೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ (ಜೂನ್. 12) ನೋಟಿಸ್ ಜಾರಿ ಮಾಡಿದ್ದರು. ಆದರೆ ಬಿಎಸ್ವೈ ಅವರು ಜೂನ್.17 ರಂದು ಹಾಜರಾಗುವುದಾಗಿ ವಿಚಾರಣೆಯಿಂದ ಹಿಂದೆ ಸರಿದಿದ್ದರು.
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…