ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೋ ತಜ್ಞರ ತಂಡ ಭೇಟಿ

ತಿ.ನರಸೀಪುರ : ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

10 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

1 hour ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

3 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

3 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

4 hours ago