ತಿ.ನರಸೀಪುರ : ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.
ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.
ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.
ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು
ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…