ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೋ ತಜ್ಞರ ತಂಡ ಭೇಟಿ

ತಿ.ನರಸೀಪುರ : ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

9 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

10 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

10 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

11 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

11 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

12 hours ago