ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೋ ತಜ್ಞರ ತಂಡ ಭೇಟಿ

ತಿ.ನರಸೀಪುರ : ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

3 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago