ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೋ ತಜ್ಞರ ತಂಡ ಭೇಟಿ

ತಿ.ನರಸೀಪುರ : ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago