ಜಿಲ್ಲೆಗಳು

ಯೂನಿಟ್‌ಗೆ 1.46 ರೂ. ಹೆಚ್ಚಳಕ್ಕೆ ಸೆಸ್ಕ್ ಪ್ರಸ್ತಾಪ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿಚಾರಣೆ
ದರ ಹೆಚ್ಚಳಕ್ಕೆ ಅವಕಾಶ ಕೊಡದಂತೆ ಸಾರ್ವಜನಿಕರ ಒತ್ತಾಯ

ಮೈಸೂರು: ಕೊರೊನಾ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ, ಬಳಕೆ ಕಡಿಮೆ, ಬಡ್ಡಿದರದಲ್ಲಿ ಹೆಚ್ಚಳ, ಸರ್ಕಾರಿ ಯೋಜನೆಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಸೇವೆ ಒದಗಿಸುವುದೂ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಕಲ್ಪಿಸಲು ಎಲ್ಲಾ ವೆಚ್ಚಗಳನ್ನೊಳಗೊಂಡಂತೆ ಪ್ರತಿ ಯೋನಿಟ್‌ಗೆ 1.46 ಪೈಸೆ ವಿದ್ಯುತ್ ದರ ಹೆಚ್ಚಳಕ್ಕೆ ಅನುಮತಿ ಕೋರಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತವು (ಸೆಸ್ಕ್) ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಕ್ಕೆ ಪ್ರಸ್ತಾಪ ಸಲ್ಲಿಸಿದೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ವಿದ್ಯುಚ್ಛಕ್ತಿ ಆಯೋಗದ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆಯಲ್ಲಿ 2023-24ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಅರ್ಜಿ ಕುರಿತು ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ದರ ಪರಿಷ್ಕರಣೆ ಕುರಿತಂತೆ ಬೇಡಿಕೆ ಇಡಲಾಯಿತು. ಆದರೆ, ಇದಕ್ಕೆ ಅಪಸ್ವರ ತೆಗೆದ ರೈತರು, ಕೈಗಾರಿಕಾ ಸಂಘಗಳ ಪ್ರತಿನಿಧಿಗಳು , ವಾಣಿಜ್ಯೋದ್ಯಮಿಗಳು ದರ ಹೆಚ್ಚಳವನ್ನು ವಿರೋಧಿಸಿದರು.

ಸಭೆಯ ಆರಂಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿ ಅವರು ೨೦೨೧-೨೨ನೇ ಸಾಲಿನ ಕೊರತೆ 382.57 ಕೋಟಿ ರೂ.ಗಳಾಗಿದ್ದು, 2023-24ಕ್ಕೆ ಪ್ರಸ್ತುತ ವಿದ್ಯುತ್ ದರಗಳಿಂದ 5572.74 ಕೋಟಿ ರೂ.ಆದಾಯ ಬರಲಿದ್ದು, ಅಗತ್ಯವಿರುವ   6622.48ಕೋಟಿ ರೂ. ವೆಚ್ಚವಾಗಲಿದೆ. ಹಾಗಾಗಿ, 2021-22ನೇ ಸಾಲಿನ ಕೊರತೆ382.57 ಕೋಟಿ ರೂ. ಮತ್ತು 2023-24ನೇ ಸಾಲಿನ ಅಂದಾಜು ಕೊರತೆ  667.17ಕೋಟಿ ರೂ. ಸೇರಿ ಒಟ್ಟು 1049.74ಕೋಟಿ ರೂ.ಗಳಾಗುವ ಕಾರಣ ಸರಾಸರಿ ಪ್ರತಿಯೂನಿಟ್‌ಗೆ 1.46 ಪೈಸೆ ಹೆಚ್ಚಳ ಮಾಡಲು ಅನುವು ಮಾಡಿಕೊಡಬೇಕು ಎಂದು ಪ್ರಸ್ತಾಪ ಸಲ್ಲಿಸಿದರು.

2023-24ನೇ ಸಾಲಿನಲ್ಲಿ  8245.68ದಶಲಕ್ಷ ಯೂನಿಟ್‌ಗಳ ವಿದ್ಯುತ್ ಖರೀದಿ ಮಾಡಿದರೆ, 7167.89ದಶಲಕ್ಷ ಯೂನಿಟ್‌ಗಳ ವಿದ್ಯುತ್ ಮಾರಾಟವಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ವಿದ್ಯುತ್ ಖರೀದಿಗೆ 4603.2 ಕೋಟಿ ರೂ., ಕಾರ್ಯ ಮತ್ತುಪಾಲನೆ ವೆಚ್ಚ   971.89ಕೋಟಿ ರೂ., ಸವಕಳಿ 431.85 ಕೋಟಿ ರೂ., ಬಡ್ಡಿ ಮತ್ತು ಆರ್ಥಿಕ ವೆಚ್ಚಗಳಿಗೆ  505.14 ಕೋಟಿ ರೂ., ಇತರೆ ಖರ್ಚು 12.2 ಕೋಟಿ ರೂ., ಗ್ರಾಹಕ ಶಿಕ್ಷಣಕ್ಕೆ 0.5 ಕೋಟಿ ರೂ. ಸೇರಿದಂತೆ  6522.48 ಕೋಟಿ ರೂ. ಖರ್ಚಾದರೆ, ವಿದ್ಯುತ್ ದರಗಳಿಂದ 5572.74 ಕೋಟಿ ರೂ. ಕಂದಾಯ ಬರಲಿದೆ. ಹೀಗಾಗಿ, ಕೊರತೆ ನೀಗಿಸಲು ದರ ಹೆಚ್ಚಳ ಮಾಡುವುದು ಅಗತ್ಯವಾಗಿದೆ. ನಮ್ಮ ಬೇಡಿಕೆಯನ್ನು ಪರಿಗಣಿಸಿ ಒಪ್ಪಿಗೆ ಕೊಡಬೇಕು ಎಂದು ಕೋರಿದರು.

ಕೊರೊನಾ ವರ್ಷದಲ್ಲಿ ಮಾರಾಟ ಕಡಿಮೆ: ಕೊರೊನಾ ವರ್ಷದಲ್ಲಿ ವಿದ್ಯುತ್ ಬೇಡಿಕೆ ಮತ್ತು ಮಾರಾಟ ಕಡಿಮೆಯಾಗಿದ್ದರಿಂದ 2021ರ ಅವಧಿಯಲ್ಲಿ ನಷ್ಟವಾಗಿದೆ. ಸರ್ಕಾರಿ ಯೋಜನೆಗಳನ್ನು ಮುಂದುವರಿಸುವುದೂ ಸೇರಿದಂತೆ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಕೊಡಲಾಗಿದೆ. ಕೈಗಾರಿಕೆಗಳು ಬಂದ್ ಆಗಿದ್ದರಿಂದ ಬೇಡಿಕೆ ಬರಲಿಲ್ಲ, ಮಾರಾಟವೂ ನಡೆಯಲಿಲ್ಲ. ಹಾಗಾಗಿ, ನಷ್ಟಕ್ಕೆ ಕಾರಣವಾಗಿದೆ. ಆದರೆ, ಈ ವರ್ಷದಲ್ಲಿ ಅದನ್ನು ಸರಿದೂಗಿಸಿಕೊಳ್ಳುವ ಕೆಲಸ ಮಾಡಲಾಗಿದೆ ಎಂದು ಜಯವಿಭವಸ್ವಾಮಿ ಆಯೋಗದ ಗಮನಕ್ಕೆ ತಂದರು.

ಒಟ್ಟು ವೆಚ್ಚ  6522.48ಕೋಟಿ ರೂ.
ಆದಾಯ  5572.74 ಕೋಟಿ ರೂ.

ಯಾವುದಕ್ಕೆ ಎಷ್ಟು?

ವಿದ್ಯುತ್ ಖರೀದಿಗೆ 4603.2 ಕೋಟಿ ರೂ.

ಕಾರ್ಯ ಮತ್ತು ಪಾಲನೆ ವೆಚ್ಚ  971.89 ಕೋಟಿ ರೂ.

ಸವಕಳಿ ವೆಚ್ಚ431.85 ಕೋಟಿ ರೂ.

ಬಡ್ಡಿ ಮತ್ತು ಆರ್ಥಿಕ ವೆಚ್ಚ505.14 ಕೋಟಿ ರೂ.

ಇತರೆ ಖರ್ಚು 12.2 ಕೋಟಿ ರೂ.

ಗ್ರಾಹಕ ಶಿಕ್ಷಣಕ್ಕೆ 0.5 ಕೋಟಿ ರೂ.

 

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

8 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

8 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

12 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

12 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

13 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

13 hours ago